ಸಿಎಂ ಏಕನಾಥ್ ಶಿಂಧೆ ಭೇಟಿ ಮಾಡಿದ ಶರದ ಪವಾರ್ : ‘ವೈಯಕ್ತಿಕ ಭೇಟಿ’ ಎಂದ ಬಿಜೆಪಿ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ ಪವಾರ್ ಅವರು ಗುರುವಾರ ಮುಂಬೈನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿಯಾದರು.
ಸಭೆಯ ಕುರಿತು ಟ್ವೀಟ್ ಮಾಡಿರುವ ಶರದ ಪವಾರ್ ಅವರು, ದಕ್ಷಿಣ ಮುಂಬೈನ ಐಕಾನಿಕ್ ಸಿನಿಮಾ ಹಾಲ್ ಮರಾಠ ಮಂದಿರದ 75ನೇ ವಾರ್ಷಿಕೋತ್ಸವಕ್ಕೆ ಮುಖ್ಯಮಂತ್ರಿಯನ್ನು ಆಹ್ವಾನಿಸಲು ಹೋಗಿದ್ದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣದ ಮಿತ್ರಪಕ್ಷವಾದ ಬಿಜೆಪಿ, ಈ ಸಭೆ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ, ಅದು ವೈಯಕ್ತಿಕ ಭೇಟಿಯಾಗಿದೆ ಎಂದು ಹೇಳಿದೆ.
ಮಹಾರಾಷ್ಟ್ರದಲ್ಲಿ ಮರಾಠಿ ಚಲನಚಿತ್ರಗಳು, ಚಿತ್ರಮಂದಿರಗಳು, ಕಲಾವಿದರು ಮತ್ತು ಕುಶಲಕರ್ಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ.
ಮುಂಬೈನ ಮರಾಠಾ ಮಂದಿರದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಂಸ್ಥೆಯು ಸ್ಮರಣಾರ್ಥ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ಗುರುವಾರ ನಾನು ಮಹಾರಾಷ್ಟ್ರದ ಗೌರವಾನ್ವಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅವರ ಅಧಿಕೃತ ನಿವಾಸ ವರ್ಷಾದಲ್ಲಿ ಭೇಟಿ ಮಾಡಿದ್ದೇನೆ ಎಂದು ಪವಾರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
“ಮಹಾರಾಷ್ಟ್ರದ ಮರಾಠಿ ಚಲನಚಿತ್ರ, ರಂಗಭೂಮಿ ಮತ್ತು ಕಲಾ ಕ್ಷೇತ್ರದ ಕಲಾವಿದರು ಮತ್ತು ಕುಶಲಕರ್ಮಿಗಳ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಸಭೆಯನ್ನು ಆಯೋಜಿಸುವ ಬಗ್ಗೆ ಮತ್ತು ಚಲನಚಿತ್ರ, ರಂಗಭೂಮಿ, ಜಾನಪದ ಕಲೆ, ವಾಹಿನಿಗಳು ಮತ್ತು ಇತರ ಮನರಂಜನಾ ಮಾಧ್ಯಮಗಳ ಸಂಸ್ಥೆಗಳನ್ನು ಸಭೆಗೆ ಆಹ್ವಾನಿಸುವ ಬಗ್ಗೆಯೂ ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮತ್ತೊಂದು ಟ್ವೀಟ್ ಹೇಳಿದೆ.
ಸಭೆಯ ಸ್ವಲ್ಪ ಸಮಯದ ನಂತರ, ಬಿಜೆಪಿ ನಾಯಕ ಮತ್ತು ರಾಜ್ಯ ಸಚಿವ ಸುಧೀರ ಮುಂಗಂಟಿವಾರ್ ಅವರು ಈ ಸಭೆ ವೈಯಕ್ತಿಕವಾಗಿದೆ ಮತ್ತು ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಇದು ವೈಯಕ್ತಿಕವಾ ಭೇಟಿಯಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement