ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರ ನಿರ್ದೇಶನದ ಮೇರೆಗೆ ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ಅವರಿಗೆ ಭಾನುವಾರ ಕೋಲ್ಕತ್ತಾದಿಂದ ಬೆಂಗಳೂರಿಗೆ ತೆರಳಲು ವಿಮಾನ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಇಂಡಿಗೋ ಏರ್ ಲೈನ್ಸ್ ನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ. ಈ ವಿಮಾನವು ಸಂಜೆ 4:15ಕ್ಕೆ ಬಿಡಲಿದ್ದು, ಬೆಂಗಳೂರಿಗೆ 6:50ಕ್ಕೆ ಆಗಮಿಸಲಿದೆ. ರೈಲು ಅಪಘಾತದಿಂದಾಗಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಯಾವುದೇ ರೈಲುಗಳಿಲ್ಲ ಮತ್ತು ತರಬೇತುದಾರರ ಕೋರಿಕೆಯ ಮೇರೆಗೆ ಈ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement