ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕೊಲೆಯಾದ ಯುವಕನನ್ನು ವರುಣ್(28) ಎಂದು ಗುರುತಿಸಲಾಗಿದೆ. ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದ್ದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಅರೋಪ ಕಬಾಬ್ ಮೂರ್ತಿ ಎಂಬವರು ವರುಣ್‌ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ವರುಣ್‌ ಅವರನ್ನು ತಕ್ಷಣವೇ ಶಿವಮೊಗ್ಗಕ್ಕೆ ಕರೆದೊಯ್ಯದರೂ ಪ್ರಯೋಜನವಾಗಿಲ್ಲ. ಮಂಜು ಹಾಗೂ ಸಂಜು ಎಂಬವರಿಗೂ ಗಾಯಗಳಾಗಿವೆ.
ಸ್ಥಳಕ್ಕೆ ಎಸ್‌.ಪಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement