11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಇಂದು, ಸೋಮವಾರ ಅಧಿಸೂಚನೆ ಹೊರಡಿಸಿದೆ. 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ ಮೋಹನ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.
ಐಎಎಸ್ ಅಧಿಕಾರಿ ಉಮಾಶಂಕರ ಎಸ್.ಆರ್. ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಂಜುನಾಥ ಪ್ರಸಾದ ಅವರನ್ನು ಸಹಕಾರ ಇಲಾಖೆಯ ಪ್ರಿನ್ಸಿಪಲ್ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವರ್ಗಾವಣೆ ಮಾಡಿ, ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.
ಐಎಎಸ್ ಅಧಿಕಾರಿ ಮೋಹನರಾಜ ಕೆ.ಪಿ ಅವರನ್ನು ಆರ್ಟಿಕಲ್ಚರ್ ಮತ್ತು ಸೆರಿಕಲ್ಚರ್ ಇಲಾಖೆಯ ಸೆಕ್ರೇಟರಿಯಾಗಿ, ಡಾ.ರಿಚರ್ಡ್ ವಿನ್ಸನ್ ಡಿಸೋಜಾ ಅವರನ್ನು ಎಂಎಸ್ಎಂಇ ಮತ್ತು ಮೈನ್ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.

ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿರುವ ಐಎಎಸ್ ಅಧಿಕಾರಿ ಗಿರೀಶ ಆರ್. ಅವರನ್ನು ಮೈನಿಂಗ್ ಮತ್ತು ಜಿಯೋಲಜಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಕರೆ ಗೌಡ ಅವರನ್ನು ಬೆಂಗಳೂರಿನ ಅಟಲ್ ಸ್ನೇಹಿ ಕೇಂದ್ರದ ನಿರ್ದೇಶಕರಾಗಿ, ಯಲಗೌಡ ಶಿವನಗೌಡ ಪಾಟೀಲ ಅವರನ್ನು ತುಮಕೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ ಬೆಂಗಳೂರಿನ ಅಗ್ರಿಕಲ್ಚರ್ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಜಗದೀಶ ಜಿ. ಅವರನ್ನು ಕೆ ಎಸ್ ಟಿ ಡಿ ಸಿಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ.ಮಹೇಶ ಎಂ ಅವರನ್ನು ಕರ್ನಾಟಕ ಸೋಪ್ ಮತ್ತು ಮಾರ್ಜಕ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವರ್ಗಾವಣೆ ಮಾಡಿ ಕೆಐಎಡಿಬಿ ಸಿಇಓ ಆಗಿ ನೇಮಕ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement