ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಎರಡು ಹುಲಿಗಳ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟಿದೆ ಎಂದು ವರದಿಯಾಗಿದೆ.
ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಇಂದು ಬುಧವಾರ (ಜೂನ್ 7) ಬೆಳಿಗ್ಗೆ ಸಾವಿಗೀಡಾಗಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ ಸಿಗಬೇಕಾಗಿದೆ ಎಂದು ಜೈವಿಕ ಉದ್ಯಾನವನದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ