10 ರೂ. ಕೇಳಿದ್ದಕ್ಕೆ 12 ವರ್ಷದ ಮಗನನ್ನೇ ಕತ್ತು ಹಿಸುಕಿ ಸಾಯಿಸಿದ ತಂದೆ

ಚತ್ರಾ (ಜಾರ್ಖಂಡ್): 10 ರೂಪಾಯಿ ಕೇಳಿದ್ದಕ್ಕೆ 48 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಶಿಷ್ಟನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕರೈಲಿಬಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪಪ್ಪು ಕುಮಾರ ಎಂದು ಗುರುತಿಸಲಾದ ಬಾಲಕನ ತಂದೆ-ತಾಯಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕುಡಿದ ಸ್ಥಿತಿಯಲ್ಲಿದ್ದರು. ಮತ್ತು ಹುಡುಗ ತನ್ನ ತಂದೆ ಬಳಿ ₹ 10 ಕೇಳಿದಾಗ ಅವರಿಬ್ಬರೂ ಜಗಳವಾಡುತ್ತಿದ್ದರು.ಇದರಿಂದ ಸಿಟ್ಟಿಗೆದ್ದ ಆರೋಪಿ ತಂದೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತಂದೆಯೇ ಬಾಲಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಾಲಕ ₹ 10 ಏಕೆ ಕೇಳಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಠಾಣೆ ಪ್ರಭಾರಿ ಗುಲಾಂ ಸರ್ವರ್ ತಿಳಿಸಿದ್ದಾರೆ.
ಮೃತನ 15 ವರ್ಷದ ಸಹೋದರಿ ಇಟ್ಟಿಗೆ ಗೂಡು ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಆಕೆ ಕೂಗಿದ ನಂತರ ಉಳಿದವರಿಗೆ ಇದು ತಿಳಿದಿದೆ.ಆರೋಪಿಯನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಗುಲಾಂ ಸರ್ವರ್ ತಿಳಿಸಿದ್ದಾರೆ

ಪ್ರಮುಖ ಸುದ್ದಿ :-   ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement