ಮುರುಡೇಶ್ವರ :ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ವಿದ್ಯಾರ್ಥಿ ಸಾವು, ಮತ್ತಿಬ್ಬರ ರಕ್ಷಣೆ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ಇಂದು, ಮಂಗಳವಾರ ಕೂಡ ಓರ್ವ ಪ್ರವಾಸಿಗ ಲೈಫ್ ಗಾರ್ಡ್‌ಗಳ ಸೂಚನೆಗೆ ಕ್ಯಾರೆ ಎನ್ನದೆ ಸಮುದ್ರಕ್ಕಿಳಿದ ನಂತರ ಅಲೆಗೆ ಸಿಲುಕಿ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದ ವರದಿಯಾಗಿದೆ.
ಕಣ್ಮರೆಯಾದ ಯುವಕನ್ನು ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ನಿವಾಸಿ, ಇಂಜಿನಿಯರಿಂಗ್ ವಿದ್ಯಾರ್ಥಿ ಪವನ್ ನಾಯ್ಕ(20) ಎಂದು ಹೇಳಲಾಗಿದೆ.
ಈತ 6 ಜನ ಸ್ನೇಹಿತರೊಂದಿಗೆ ಮಂಗಳವಾರ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ಸಮುದ್ರಕ್ಕೆ ಈಜಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸಮುದ್ರ ತೀರದಲ್ಲಿರುವ ಲೈಫ್ ಗಾರ್ಡ್ ಗಳ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದರೂ ಧಿಕ್ಕರಿಸಿ ಸಮುದ್ರಕ್ಕೆ ಇಳಿದು ಜೋರಾದ ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದಾನೆ.
ನಿನ್ನೆ ಕೂಡ ಇಂಥದ್ದೇ ದುರ್ಘಟನೆ ನಡೆದಿದ್ದು, ಓರ್ವ ಯುವಕ ನಾಪತ್ತೆಯಾಗಿದ್ದಾನೆ. ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement