ಬಿಪೋರ್‌ ಜಾಯ್ ಭೀತಿ : ಗುಜರಾತಿನಲ್ಲಿ ತಾತ್ಕಾಲಿಕ ಶಿಬಿರಗಳಿಗೆ 50,000 ಜನರ ಸ್ಥಳಾಂತರ

ನವದೆಹಲಿ : ಬಿಪೋರ್‌ ಜಾಯ್ ಚಂಡಮಾರುತವು ಗುಜರಾತ್ ಕರಾವಳಿಯತ್ತ ಧಾವಿಸುತ್ತಿದೆ, ಸೌರಾಷ್ಟ್ರ-ಕಚ್ ಪ್ರದೇಶದ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಚಂಡಮಾರುತದ ನಿರೀಕ್ಷಿತ ಭೂಕುಸಿತದ ಮುನ್ನ ಅಧಿಕಾರಿಗಳು ಇದುವರೆಗೆ ಗುಜರಾತ್‌ನ ಕರಾವಳಿ ಪ್ರದೇಶಗಳಿಂದ 50,000 ಜನರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ.
ಏತನ್ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಮೂರು ಸೇನಾ ಮುಖ್ಯಸ್ಥರೊಂದಿಗೆ ಮಾತನಾಡಿದ್ದಾರೆ ಮತ್ತು ‘ಬಿಪೋರ್‌ ಜಾಯ್’ ಚಂಡಮಾರುತದ ಪ್ರಭಾವವನ್ನು ಎದುರಿಸಲು ಸಶಸ್ತ್ರ ಪಡೆಗಳ ಸಿದ್ಧತೆಗಳನ್ನು ಪರಿಶೀಲಿಸಿದರು.
ಗುಜರಾತಿನ ಜಖೌ ಬಂದರು ಸಮೀಪದಲ್ಲಿ ಇದೇ 15ರಂದು(ಗುರುವಾರ) ಪ್ರಬಲ ಚಂಡಮಾರುತ ಬಿಪೊರ್‌ಜಾಯ್‌, ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಕರಾವಳಿ ಪ್ರದೇಶಗಳ ವ್ಯಾಪ್ತಿಯಲ್ಲಿನ ಜನರನ್ನು ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗಿದೆ.

ಅತಿ ಹೆಚ್ಚಿನ ಹಾನಿಯಾಗುವ ಭೀತಿ ಎದುರಿಸುತ್ತಿರುವ ಕಚ್‌, ದೇವಭೂಮಿ ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿನ ಕರಾವಳಿ ಪ್ರದೇಶಗಳ 10 ಕಿ.ಮೀ. ವ್ಯಾಪ್ತಿಯಲ್ಲಿನ 50,000 ಜನರನ್ನು ಮಂದಿಯನ್ನು ಈಗಾಗಲೇ ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್‌ ರಾಜ್ಯಾದ್ಯಂತ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ. ಅತಿ ತೀವ್ರತೆಯ ಚಂಡಮಾರುತವಾಗಿ ಮಾರ್ಪಾಡಾಗಿರುವ ಬಿಪೋರ್‌ ಜಾಯ್‌ ಉತ್ತರ-ಈಶಾನ್ಯಕ್ಕೆ ಚಲಿಸುತ್ತಿದೆ. ಗುಜರಾತ್‌ನ ಸೌರಾಷ್ಟ್ರ ಮತ್ತು ಕಛ್‌ ಹಾಗೂ ಪಾಕಿಸ್ತಾನದ ಕರಾಚಿ ಕರಾವಳಿಯನ್ನು 125-150 ಕಿ.ಮೀ. ವೇಗದೊಂದಿಗೆ ಹಾದು ಹೋಗಲಿದೆ. ಗುರುವಾರ ಸಂಜೆ, ಗುಜರಾತ್‌ನ ಜಖೌ ಬಂದರಿನ ಸಮೀಪವೇ ಬಿಪೊರ್‌ಜಾಯ್ ಚಂಡಮಾರುತವು ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ನಿರೀಕ್ಷೆಯಿದೆ. ಈ ಚಂಡಮಾರುತವು ಭಾರೀ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇಂದಿನ ಪ್ರಮುಖ ಸುದ್ದಿ :-   ಶರದ್ ಪವಾರ್ ಬಣದ ಎನ್‌ಸಿಪಿಯ 10 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಅಜಿತ ಪವಾರ್ ಬಣ

ಶಾಲೆಗಳು ಬಂದ್
ಗುಜರಾತ್‌ನ ಐದು ಪೀಡಿತ ಜಿಲ್ಲೆಗಳಾದ ಕಚ್, ಪೋರಬಂದರ್, ಅಮ್ರೇಲಿ, ಗಿರ್ ಸೋಮನಾಥ್, ದ್ವಾರಕಾದಲ್ಲಿ ಎರಡು ದಿನಗಳ ಕಾಲ ಶಾಲೆಗಳನ್ನು ಮುಚ್ಚಲಾಗಿದೆ. ಬುಧವಾರ ನಡೆಯಬೇಕಿದ್ದ ಗುಜರಾತ್ ಸರ್ಕಾರದ ಕ್ಯಾಬಿನೆಟ್ ಸಭೆಯನ್ನು ರದ್ದುಗೊಳಿಸಲಾಗಿದ್ದು, ಎಲ್ಲಾ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೂಚಿಸಿದ್ದಾರೆ.
69 ರೈಲುಗಳು ರದ್ದು…
69 ರೈಲುಗಳನ್ನು ರದ್ದುಗೊಳಿಸಲಾಗಿದೆ, ಬೈಪೋರ್‌ ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ 33 ರೈಲುಗಳನ್ನು ಅಲ್ಪಾವಧಿಗೆ ಕೊನೆಗೊಳಿಸಲಾಗಿದೆ, 27 ರೈಲುಗಳನ್ನು ಮುಂಜಾಗ್ರತಾ ಕ್ರಮವಾಗಿ ಸಂಕ್ಷಿಪ್ತಗೊಳಿಸಲಾಗಿದೆ ಎಂದು ಸಿಪಿಆರ್‌ಒ ಪಶ್ಚಿಮ ರೈಲ್ವೆ ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement