ಚಿಕ್ಕೋಡಿ : ಬೈಕ್-ಟೆಂಪೋ ಡಿಕ್ಕಿ , ಮೂವರು ಯುವಕರ ಸಾವು

ಬೆಳಗಾವಿ: ಬೈಕ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಮೇಲೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಚಿಕ್ಕೋಡಿ ಪಟ್ಟಣದ ಹೊರವಲಯದ ಬಸನಾಳ ಗಡ್ಡೆ ಬಳಿ ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿ ಮೇಲೆ ಅಪಘಾತ ನಡೆದಿದೆ.ಮೃತ ಯುವಕರನ್ನು ಕೇರೂರ ಗ್ರಾಮದ ಪ್ರಶಾಂತ ಬೈರು ಖೋತ (೨೨), ಸತೀಶ ಕಲ್ಲಪ್ಪ ಹಿರೇಕೊಡಿ(೨೩), ಯಲಗೌಡ ಚಂದ್ರಕಾಂತ ಪಾಟೀಲ (೨೨) ಎಂದು ಗುರುತಿಸಲಾಗಿದೆ.
ಈ ಮೂವರು ಯುವಕರು ಬೈಕ್‌ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರ ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ- ಅಂಕಲಿ ರಸ್ತೆಯ ಬಸವನಾಳಗಡ್ಡೆ ಬಳಿ ಟೆಂಪೋ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಓರ್ವ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂದ ಚಿಕ್ಕೋಡಿ ಸಂಚಾರಿ

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement