ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ ರೈಲಿಗೆ ಚಾಲನೆ

ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಒಂದೇ ದಿನ ದೇಶಾದ್ಯಂತ ಐದು ಮಾರ್ಗಗಳಲ್ಲಿ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದ್ದು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ ರೈಲು ಕೂಡ ಸಂಚಾರ ಆರಂಭಿಸಲಿದೆ. ಇದು ಧಾರವಾಡದ ವರೆಗೂ ಸಂಚರಿಸಲಿದೆ.
ಬೆಂಗಳೂರು- ಹುಬ್ಬಳ್ಳಿ-ಧಾರವಾಡ ಸೇರಿದಂತೆ ದೇಶದ 5 ಮಾರ್ಗಗಳಲ್ಲಿ ಹೊಸ ವಂದೇ ಭಾರತ ರೈಲುಗಳಿಗೆ ಭಾರತೀಯ ರೈಲ್ವೆ ಜೂನ್‌ 26ರಂದು ಚಾಲನೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಚಾಲನೆ ನೀಡಿದ ಎರಡು ದಿನಗಳ ನಂತರ ವಾಣಿಜ್ಯಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸಲಿರುವ ವಂದೇ ಭಾರತ ರೈಲಿಗೆ ಯಶವಂತಪುರ, ದಾವಣಗೆರೆ ಹಾಗೂ ಹುಬ್ಬಳ್ಳಿಯಲ್ಲಿ ನಿಲುಗಡೆ ನೀಡಲಾಗುತ್ತದೆ ಎನ್ನಲಾಗಿದೆ. ಇದು ಸದ್ಯಕ್ಕೆ ಎಂಟು ಕೋಚ್‌ಗಳು ಇರಲಿದೆ ಎಂದು ಹೇಳಲಾಗಿದೆ.
ಬೆಂಗಳೂರು- ಹುಬ್ಬಳ್ಳಿ, ಮುಂಬೈ- ಗೋವಾ, ಪಾಟ್ನಾ- ರಾಂಚಿ, ಭೋಪಾಲ್‌- ಇಂದೋರ್‌ ಮತ್ತು ಭೋಪಾಲ್‌- ಜಬಲ್‌ಪುರ ಮಾರ್ಗಗಳಲ್ಲಿ ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ಒಂದೇ ದಿನ 5 ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ. ಈ ರೈಲುಗಳಿಗೆ ಚಾಲನೆ ನೀಡಿದ ಬಳಿಕ ದೇಶದಲ್ಲಿ ವಂದೇ ಭಾರತ ರೈಲುಗಳ ಸಂಖ್ಯೆ 24ಕ್ಕೆ ಏರಲಿದ್ದು, ಕರ್ನಾಟಕದಲ್ಲಿ 2ಕ್ಕೆ ಏರಲಿದೆ.
ಈ ಮೊದಲು ಮೈಸೂರು-ಚೆನ್ನೈ ವಂದೇ ಭಾರತ ಆರಂಭಿಸಲಾಗಿತ್ತು. 288 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬಳಿಕ ಮೊದಲ ಬಾರಿಗೆ ವಂದೇ ಭಾರತ ರೈಲಿಗೆ ಚಾಲನೆ ನೀಡಲಾಗುತ್ತಿದ್ದು, ದುರಂತದ ಬಳಿಕ ಮುಂಬೈ ಮತ್ತು ಗೋವಾ ನಡುವಿನ ರೈಲು ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement