ರಾಹುಲ್ ಗಾಂಧಿ ವೀಡಿಯೊ ಪೋಸ್ಟ್‌ : ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಮಾಳವೀಯ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ದೂರು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ ಸೂದ್ ವಿರುದ್ಧ ಕರ್ನಾಟಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ದೂರು ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತ ಪೋಸ್ಟ್ ಮಾಡಿದ್ದಾರೆ, ವಿಶೇಷವಾಗಿ ಅನಿಮೇಟೆಡ್ ವೀಡಿಯೊವನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದಾರೆ.
“ಅಮಿತ್ ಮಾಳವೀಯ ಅವರು ಹಂಚಿಕೊಂಡ ವೀಡಿಯೊದಲ್ಲಿ, ರಾಹುಲ್ ಗಾಂಧಿ ಬಗ್ಗೆ ದುರುದ್ದೇಶಪೂರಿತ ಮತ್ತು ಸುಳ್ಳು 3D ಅನಿಮೇಟೆಡ್ ವೀಡಿಯೊ ಮಾಡಲಾಗಿದೆ. ಇದನ್ನು ಬಿಜೆಪಿಯ ಪ್ರಮುಖ ನಾಯಕರಾದ ಜೆಪಿ ನಡ್ಡಾ ಮತ್ತು ಅರುಣ್ ಸೂದ್ ಅನುಮೋದಿಸಿದ್ದಾರೆ” ಎಂದು ಖರ್ಗೆ ಆರೋಪಿಸಿದ್ದಾರೆ.
“ಮಾಳವೀಯ ಅವರ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೂನ್ 17, 2023 ರಂದು ವೀಡಿಯೊವನ್ನು (ರಾಹುಲ್) ಗಾಂಧಿ ಮತ್ತು ಕಾಂಗ್ರೆಸ್‌ ಪ್ರತಿಷ್ಠೆಗೆ ಕಳಂಕ ತರುವ ಸ್ಪಷ್ಟ ಮತ್ತು ದುರುದ್ದೇಶಪೂರಿತ ಉದ್ದೇಶದಿಂದ ಪ್ರಸಾರ ಮಾಡಲಾಗಿದೆ. ಆದರೆ (ಸಹ) ಕೋಮು ವೈಷಮ್ಯವನ್ನು ಪ್ರಚೋದಿಸಲು ಮತ್ತು ಪಕ್ಷ ಮತ್ತು ಅದರ ನಾಯಕರ ವ್ಯಕ್ತಿತ್ವವನ್ನು ತಪ್ಪಾಗಿ ನಿರೂಪಿಸಲು ಪ್ರಸಾರ ಮಾಡಲಾಗಿದೆ. ಈ ವೀಡಿಯೊ ಕಾಂಗ್ರೆಸ್ ಮತ್ತು ಅದರ ನಾಯಕರನ್ನು “ದೇಶ ವಿರೋಧಿ ಅಂಶಗಳು” ಎಂದು ಬಿಂಬಿಸುತ್ತದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಅವಹೇಳನಕಾರಿ ಚಿತ್ರಣವು ನಿಸ್ಸಂದೇಹವಾಗಿ ವಿವಿಧ ಧರ್ಮಗಳ ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತದೆ ಮತ್ತು ಕೋಮು ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಸಚಿವರು ಹೇಳಿದ್ದಾರೆ.
ಪ್ರಶ್ನೆಯಲ್ಲಿರುವ ವೀಡಿಯೊವನ್ನು ಜೂನ್ 17 ರಂದು ಮಾಳವಿಯಾ ಅವರು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ “ರಾಹುಲ್ ಗಾಂಧಿ ಅಪಾಯಕಾರಿ ಮತ್ತು ಕಪಟ ಆಟ ಆಡುತ್ತಿದ್ದಾರೆ…” (“Rahul Gandhi is dangerous and playing an insidious game…”) ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಮಾಳವಿಯಾ ಮರುದಿನ ಅದೇ ವೀಡಿಯೊವನ್ನು ಹಿಂದಿ ಉಪಶೀರ್ಷಿಕೆಗಳೊಂದಿಗೆ ಮರು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಸಂವಹನ ವಿಭಾಗದ ಕರ್ನಾಟಕ ಘಟಕದ ಮುಖ್ಯಸ್ಥರೂ ಆಗಿರುವ ಖರ್ಗೆ ಅವರು ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಮೂವರು ನಾಯಕರು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಮತ್ತು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement