ದೇಶದ ಪ್ರಧಾನಿ ಯಾರೆಂದು ಹೇಳಲು ಬಾರದ ವರನ ಕೈಬಿಟ್ಟು ಆತನ ಸಹೋದರನ ಕೈಹಿಡಿದ ನವವಿವಾಹಿತೆ…!

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ವೇಳೆ ದೇಶದ ಪ್ರಧಾನಿ ಯಾರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ವಧು ತನ್ನ ಮದುವೆಯನ್ನು ಮುರುದಿಕೊಂಡ ಘಟನೆ ವರದಿಯಾಗಿದೆ..! ನಂತರ ವರನ ಕಿರಿಯ ಸಹೋದರನನ್ನು ಮದುವೆಯಾಗಿದ್ದಾಳೆ..!!
ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಪುರ ಪೊಲೀಸ್ ಠಾಣೆಯಲ್ಲಿ ಕಳೆದ ಶನಿವಾರ ಈ ವಿಚಿತ್ರ ಘಟನೆ ನಡೆದಿದೆ.
ಸೈದಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಸಿರಪುರ ಗ್ರಾಮದ ರಾಂ ಅವತಾರ ಎಂಬುವವರ ಪುತ್ರ ಶಿವಶಂಕರ (27) ಹಾಗೂ ಕರಂದ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತ್ ಪಟ್ಟಿ ಗ್ರಾಮದ ಲಖೇಡು ರಾಮ ಅವರ ಪುತ್ರಿ ರಂಜನಾ ಅವರೊಂದಿಗೆ 6 ತಿಂಗಳ ಹಿಂದೆ ನಿಶ್ಚಯವಾಗಿತ್ತು. ಅಂದಿನಿಂದ ಮೊಬೈಲ್ ಮೂಲಕ ಮಾತನಾಡುತ್ತಿದ್ದರು. ಹಾಗೂ ಜೂನ್‌ 11ರಂದು ವಿವಾಹವಾಗಿದೆ. ಜೂನ್ 12 ರಂದು ಮದುವೆಯ ನಂತರ, ವಧುವಿನ ಮನೆಯವರು ಆಯೋಜಿಸಿದ್ದ ಸಮಾರಂಭದಲ್ಲಿ, ಶಿವಶಂಕರ ಅವರಿಗೆ ತಮಾಷೆಯಾಗಿ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು.
ಆಟದ ಭಾಗವಾಗಿ ದೇಶದ ಪ್ರಧಾನಿಯ ಹೆಸರಿಡುವಂತೆ ಕೇಳಿದಳು. ಆದರೆ ಶಿವಶಂಕರ ಅವರಿಗೆ ಹೆಸರನ್ನು ಹೇಳಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ, ವಧುವಿನ ಸಂಬಂಧಿಕರು ಆತನನ್ನು ಅಪಹಾಸ್ಯ ಮಾಡಿದರು ಮತ್ತು ಆತನನ್ನು ಮಂದ ಬುದ್ಧಿಯವನೆಂದು ಪರಿಗಣಿಸಿದರು. ಇದನ್ನು ಅವಮಾನವಾಗಿ ಪರಿಗಣಿಸಿದ ವಧು ಶಿವಶಂಕರ ಜೊತೆಗಿನ ಮದುವೆ ರದ್ದುಪಡಿಸಿದಳು. ಸ್ಥಳದಲ್ಲೇ ಆತನ ಕಿರಿಯ ಸಹೋದರನನ್ನು ಮದುವೆಯಾದಳು. ಮಾವ ರಾಮ ಅವತಾರ್ ಅವರು ತನ್ನ ಸೊಸೆ ತನಗಿಂತ ಚಿಕ್ಕವನನ್ನು ಮದುವೆಯಾಗುವುದನ್ನು ವಿರೋಧಿಸಿದರು. ಹಾಗೂ ವಧುವಿನ ಮನೆಯವರು ಒತ್ತಾಯವಾಗಿ ಈ ಮದುವೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಧು ಮತ್ತು ಕಿರಿಯ ಮಗನ ಮದುವೆಯನ್ನು ಒಪ್ಪಿಕೊಳ್ಳಲಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್‌ನಿಂದ 3 ಭಾರತೀಯ ಅಥ್ಲೀಟ್‌ಗಳಿಗೆ ಚೀನಾ ನಿಷೇಧದ ನಂತರ ಕ್ರೀಡಾ ಸಚಿವರ ಪ್ರವಾಸ ರದ್ದು

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement