ಉಳ್ಳಾಲ: ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಪಾದಚಾರಿ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಉಳ್ಳಾಲದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದೆ.
ಈ ಘಟನೆಯ ವೀಡಿಯೋ ವೈರಲ್ ಆಗಿದೆ. ಮಂಗಳವಾರ ತೌಡುಗೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯು ರಸ್ತೆ ದಾಟಲು ಪ್ರಯತ್ನಿಸುತ್ತಿರುವುದನ್ನು ಇದು ತೋರಿಸುತ್ತದೆ, ಆದರೆ ರಸ್ತೆಯ ಮತ್ತೊಂದು ಕಡೆಯಿಂದ ಬಸ್ಸು ಬರುವುದನ್ನು ನೋಡದೆ ದಾಟಲು ಆ ಮಹಿಳೆ ಮುಂದಾಗಿರುವುದು ಕಂಡುಬರುತ್ತದೆ. ಆದರೆ ಎಚ್ಚೆತ್ತ ಚಾಲಕ ಸಮಯಕ್ಕೆ ಸರಿಯಾಗಿ ಬಸ್ಸನ್ನು ತಿರುಗಿಸಿ ಬ್ರೇಕ್ ಹಾಕಿದ್ದರಿಂದ ಅಕ್ಷರಶಃ ಕೂದಲೆಳೆಯ ಅಂತರದಲ್ಲಿ ಮಹಿಳೆ ಪಾರಾಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಮಹಿಳೆ ಕೈಗೆ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಮುಡಿಪು ಮಧ್ಯೆ ಓಡಾಡುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಬಸ್ ಚಾಲಕನ ಚಾಕಚಕ್ಯತೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ಲಿಪ್‌ನಲ್ಲಿ ಕೆಲವರು ಆ ಮಹಿಳೆ ಚೆನ್ನಾಗಿದ್ದಾರೆಯೇ ಎಂದು ಎಂದು ಬಂದು ವಿಚಾರಿಸಿದ್ದಾರೆ.
ಈ ದೃಶ್ಯ ಬಸ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement