ವೆಸ್ಟ್‌ ಇಂಡೀಸ್‌ ವಿರುದ್ಧ ಟೆಸ್ಟ್‌-ಏಕದಿನ ಪಂದ್ಯಗಳಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ: ಯಶಸ್ವಿ ಜೈಸ್ವಾಲಗೆ ಅವಕಾಶ, ಚೇತೇಶ್ವರ ಪೂಜಾರಗೆ ಕೊಕ್

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳಿಗೆ ಭಾರತದ ತಂಡವನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಅವರ ಅದ್ಭುತ ಪ್ರದರ್ಶನದ ನಂತರ ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿಗೆ ಭಾರತದ ತಂಡದಲ್ಲಿ ಸ್ಥಾನ ನೀಡಲಾಗಿದೆ. ವೇಗಿ ಮುಖೇಶಕುಮಾರ ಅವರ ಮೊದಲ ಟೆಸ್ಟ್ ಸ್ಥಾನ ಪಡೆದಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ, ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ ಅವರನ್ನು ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ತಂಡದಿಂದ ಕೈಬಿಡಲಾಗಿದೆ. ರೋಹಿತ್ ಶರ್ಮಾ ಟೆಸ್ಟ್ ಮತ್ತು ಏಕದಿನ ಪಂದ್ಯ ಎರಡರಲ್ಲೂ ತಂಡವನ್ನು ಮುನ್ನಡೆಸಿದರೆ, ಅಜಿಂಕ್ಯ ರಹಾನೆ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕ್ರಮವಾಗಿ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ನಿಯೋಜಿಸಲಿದ್ದಾರೆ.
ಸಿಎಸ್‌ಕೆ ಮತ್ತು ಮಹಾರಾಷ್ಟ್ರದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಟೆಸ್ಟ್‌ ಹಾಗೂ ಏಕದಿನದ ತಂಡಗಳಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು, ಅನುಭವಿ ವೇಗಿ ಉಮೇಶ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಏತನ್ಮಧ್ಯೆ, ಸಂಜು ಸ್ಯಾಮ್ಸನ್ ಅವರನ್ನು ಏಕದಿನ ತಂಡಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ.
ಭಾರತದ ಪುರುಷರ ಕ್ರಿಕೆಟ್‌ ತಂಡದ ಆಯ್ಕೆ ಸಮಿತಿಯು ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಮೂರು ಏಕದಿನದ ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಿದೆ. ಭಾರತವು ಐದು T20I ಪಂದ್ಯಗಳನ್ನು ಆಡಲು ನಿರ್ಧರಿಸಿದೆ ಮತ್ತು ಅದಕ್ಕಾಗಿ ತಂಡವನ್ನು ನಂತರ ಪ್ರಕಟಿಸಲಾಗುವುದು” ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಟೆಸ್ಟ್ ಮತ್ತು ODI ಸರಣಿಗಳ ಮುಕ್ತಾಯದ ನಂತರ ಐದು T20I ಗಳನ್ನು ಸಹ ಆಡಲಿವೆ.

ಪ್ರಮುಖ ಸುದ್ದಿ :-   ಸೌರ ವಿದ್ಯುತ್‌ ಚಾಲಿತ 3 ಟವರ್‌ಗಳು, 12 ಅಂತಸ್ತಿನ ಕಟ್ಟಡ, 300 ಕೊಠಡಿಗಳು, ಆಸ್ಪತ್ರೆ, ಸಭಾಂಗಣ ; ದೆಹಲಿಯಲ್ಲಿ 150 ಕೋಟಿ ರೂ.ವೆಚ್ಚದಲ್ಲಿ ನವೀಕರಿಸಿದ ಆರ್‌ ಎಸ್‌ ಎಸ್ ಕಚೇರಿ

ಭಾರತ ಟೆಸ್ಟ್ ತಂಡ: ರೋಹಿತ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಕೆ.ಎಸ್. ಭರತ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶಕುಮಾರ, ಜಯದೇವ ಉನದ್ಕತ್, ನವದೀಪ್ ಸೈನಿ.
ಭಾರತ ಏಕದಿನ ತಂಡ: ರೋಹಿತ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ರುತುರಾಜ ಗಾಯಕ್ವಾಡ್, ವಿರಾಟ ಕೊಹ್ಲಿ, ಸೂರ್ಯಕುಮಾರ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್),ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಸರ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ ಯಾದವ್, ಜಯದೇವ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶಕುಮಾರ.

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement