ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಸುಳಿವು ನೀಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ

ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಈ ಬಗ್ಗೆ ಸುಳಿವು ನೀಡಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಬದಲಾವಣೆಯೊಂದಿಗೆ ಚುನಾವಣೆ ಎದುರಿಸುತ್ತೇವೆ. ಈಗಾಗಲೇ ಈ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಜತೆ ಮೈತ್ರಿ ಆಗಲೂಬಹುದು ಅಂದಿಕೊಂಡಿದ್ದೇನೆ. ಆದರೆ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ತಿಳಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಬೇಕು. ಅತಿ ಹೆಚ್ಚು ಸಂಸದರನ್ನು ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ. ಲೋಕಸಭೆ ಟಿಕೆಟ್​ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಸಿ.ಪಿ ಯೋಗೇಶ್ವರ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement