“ನಾವು ಬಿಜೆಪಿ ವಿರುದ್ಧ ಮೈತ್ರಿ ಪ್ರಯತ್ನಿಸುತ್ತಿದ್ದೇವೆ, ಆದರೆ ಕಾಂಗ್ರೆಸ್, ಸಿಪಿಐ(ಎಂ)…” : ಮಮತಾ ಬ್ಯಾನರ್ಜಿ ವಾಗ್ದಾಳಿ

ಕೂಚ್ ಬೆಹಾರ (ಪಶ್ಚಿಮ ಬಂಗಾಳ): ಪಾಟ್ನಾದಲ್ಲಿ ನಡೆದ ಬೃಹತ್ ಪ್ರತಿಪಕ್ಷಗಳ ಸಭೆಯ ನಂತರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.
ನಾವು ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿ ರಚಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬಂಗಾಳದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲು ಪ್ರಯತ್ನಿಸುತ್ತಿವೆ. ನಾನು ಬಂಗಾಳದಲ್ಲಿ ಈ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸೋಮವಾರ ಕೂಚ್ ಬೆಹಾರದಲ್ಲಿ ನಡೆದ ಪಂಚಾಯತದ ಚುನಾವಣೆ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಹೇಳಿದರು.
ಕಳೆದ ಹತ್ತು ದಿನಗಳಲ್ಲಿ ಇದು ಎರಡನೇ ಬಾರಿಗೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಟೀಕಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, “ಬಿಜೆಪಿ ವಿರುದ್ಧದ ಹೋರಾಟದಲ್ಲಿ ಟಿಎಂಸಿಯ ವಿಶ್ವಾಸಾರ್ಹತೆ ಯಾವಾಗಲೂ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ” ಎಂದು ಹೇಳಿದರು. ಬಿಜೆಪಿ ವಿರುದ್ಧದ ಹೋರಾಟದಲ್ಲಿ ಇಷ್ಟು ವರ್ಷಗಳಲ್ಲಿ ಟಿಎಂಸಿ ವಹಿಸಿದ ಪಾತ್ರ ನಮಗೆಲ್ಲರಿಗೂ ತಿಳಿದಿದೆ. ಬಿಜೆಪಿ ವಿರುದ್ಧ ಹೋರಾಡುವ ಮಾರ್ಗಗಳ ಕುರಿತು ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ಗೆ ಉಪನ್ಯಾಸ ನೀಡುವ ಕೊನೆಯ ವ್ಯಕ್ತಿ ಬ್ಯಾನರ್ಜಿಯಾಗಬೇಕು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ಏತನ್ಮಧ್ಯೆ, ಪಶ್ಚಮ ಬಂಗಾಳದಲ್ಲಿ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಒಳ ಒಪ್ಪಂದ ಹೊಂದಿದೆ ಎಂಬ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಸಿಪಿಐ (ಎಂ), ಕಾಂಗ್ರೆಸ್ ಮತ್ತು ಟಿಎಂಸಿ ಒಂದೇ ದೋಣಿಯಲ್ಲಿವೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿಯೇ ಹೋರಾಡುತ್ತಿದೆ” ಎಂದು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಹೇಳಿದ್ದಾರೆ.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಣಾಯಕ ಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿದವು, ದೆಹಲಿ ಸುಗ್ರೀವಾಜ್ಞೆ ವಿಷಯಗಳಲ್ಲಿ ಕಾಂಗ್ರೆಸ್ ಸಾರ್ವಜನಿಕವಾಗಿ ಬೆಂಬಲಿಸುವವರೆಗೆ ಭವಿಷ್ಯ ಎಎಪಿ ಅಂತಹ ಯಾವುದೇ ಸಭೆಯ ಭಾಗವಾಗುವುದು ಕಷ್ಟ ಎಂದು ಪ್ರತಿಪಾದಿಸುವುದರೊಂದಿಗೆ ಬಿರುಕುಗಳು ಹೊರಹೊಮ್ಮಿದವು. .
ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪಾಟ್ನಾದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹತ್ತಕ್ಕೂ ಹೆಚ್ಚು ರಾಜಕೀಯ ಪಕ್ಷಗಳ 32 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು.

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement