ರಥಯಾತ್ರೆ ವೇಳೆ ವಿದ್ಯುತ್‌ ತಂತಿ ತಂಡಾಗಿ ಬಿದ್ದು 6 ಮಂದಿ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ (ಜೂನ್ 28) ಕಬ್ಬಿಣದಿಂದ ಮಾಡಿದ ರಥದ ಮೇಲೆ ವಿದ್ಯುತ್‌ ಹರಿಯುತ್ತಿದ್ದ ತಂತಿ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಆರಂಭಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ರಥದ ಮೆರವಣಿಗೆ ಹೋಗುತ್ತಿದ್ದಾಗ ರಥದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅದರ ಮೇಲೆ ಕನಿಷ್ಠ 20 ಜನರಿದ್ದರು. ವಿದ್ಯುತ್ ಪ್ರವಹಿಸಿ ಆರು ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ರಥವೂ ಹೊತ್ತಿ ಉರಿದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ. ಸಾವುನೋವುಗಳು ಹೆಚ್ಚಾಗುವ ನಿರೀಕ್ಷೆಯಿದೆ.
ಗಾಯಾಳುಗಳನ್ನು ಕುಮಾರ ಘಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಒಯ್ದು ಅವರನ್ನು ಉನಕೋಟಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ..
ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಅಗರ್ತಲಾದಿಂದ ಕುಮಾರ್‌ಘಾಟ್‌ಗೆ ಹೊರಟಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement