ಸಮಾನ ನಾಗರಿಕ ಸಂಹಿತೆ ವಿಧೇಯಕ ಮುಂಗಾರು ಅಧಿವೇಶನದಲ್ಲಿಯೇ ಮಂಡನೆ ?

ನವದೆಹಲಿ : ಮುಂಬರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಸಂಬಂಧ ವಿಧೇಯಕವನ್ನು ಮಂಡಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ವಿಧೇಯಕ ಅನುಮೋದನೆಗೆ ಅಗತ್ಯ ಸಂಸದರ ಬಲವಿರುವ ಹಿನ್ನೆಲೆಯಲ್ಲಿ ಸಮಾನ ನಾಗರಿಕ ಸಂಹಿತೆ ವಿಧೇಯಕಕ್ಕೆ ಸುಲಭವಾಗಿ ಅನುಮೋದನೆ ಸಿಗಲಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲ ಪ್ರತಿಪಕ್ಷಗಳಬೆಂಬಲ ಅದಕ್ಕೆ ಬೇಕಿದೆ. ಇದಕ್ಕೆ ಪೂರಕವಾಗಿ ಆಮ್‌ ಆದ್ಮಿ ಪಕ್ಷದಿಂದ ಇದರ ಪರವಾಗಿ ಬೆಂಬಲ ಸಿಕ್ಕಿದೆ.
ಯುನಿಫಾರ್ಮ್‌ ಸಿವಿಲ್‌ ಕೋಡ್‌ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ರಾಷ್ಟ್ರೀಯ ಕಾನೂನು ಮಂಡಳಿಯಿಂದ ನೋಟಿಸ್‌ ಕೂಡ ಜಾರಿ ಮಾಡಲಾಗಿದೆ. ಹಾಗೂ ಸಮಾನ ನಾಗರಿಕ ಸಂಹಿತೆ ಜಾರಿ ಸಂಬಂಧ ಸಂಸದೀಯ ಸ್ಥಾಯಿ ಸಮಿತಿಯು ಜುಲೈ 3ರಂದು ಮಹತ್ವದ ಸಭೆ ಕರೆದಿದೆ.
ಉದ್ಧವ್‌ ಠಾಕ್ರೆ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಅಗತ್ಯತೆ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ‘ಶಿವಸೇನೆ (ಉದ್ಧವ್‌ ಬಣ)’ಯಿಂದ ಬೆಂಬಲ ವ್ಯಕ್ತವಾಗಿದೆ. ಪ್ರತಿಪಕ್ಷಗಳ ಪೈಕಿ ಆಮ್‌ ಆದ್ಮಿ ಪಕ್ಷವು ಇದಕ್ಕೆ ಷರತ್ತುಬದ್ಧ ಬೆಂಬಲ ಘೋಷಿಸಿದೆ.
ಏತನ್ಮಧ್ಯೆ, ಶಿವಸೇನೆ (ಉದ್ಧವ್‌ ಬಣ) ಮಿತ್ರ ಪಕ್ಷ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ಅವರು ಸಮಾನ ನಾಗರಿಕ ಸಂಹಿತೆ ಜಾರಿ ಕುರಿತು ತಟಸ್ಥ ನಿಲುವು ತಾಳಿದ್ದಾರೆ. ಆದರೆ ಕಾಂಗ್ರೆಸ್‌ ಇದರ ಜಾರಿಯ ಪರಿಣಾಮಗಳ ಕುರಿತು ಅಧ್ಯಯನಕ್ಕೆ 9 ಸದಸ್ಯರ ಸಮಿತಿ ರಚಿಸಿದೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement