ಕುಮಟಾ: ಮಳೆ ಆರ್ಭಟಕ್ಕೆ ಇಬ್ಬರು ನೀರು ಪಾಲು

ಕಾರವಾರ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಎಂದು ಗುರುತಿಸಲಾಗಿದೆ. ವಿಪರೀತ ಮಳೆಯಿಂದ ಅಘನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನೀರು ಗದ್ದೆಗಳಿಗೆ ನುಗ್ಗಿದೆ. ಹೀಗಾಗಿ ಗದ್ದೆಗಳು ಸಂಪೂರ್ಣ ನೀರಿನಿಂದ ತುಂಬಿವೆ. ಈ ವೇಳೆಯಲ್ಲಿ ಗದ್ದೆ ಕೆಲಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಇಬ್ಬರು ಹಳ್ಳದಂಚಿನ ಜಮೀನಿನಲ್ಲಿ ಬೇಲಿ ಕಟ್ಟುತ್ತಿರುವಾಗ ಓರ್ವ ಕಾಲು ಜಾರಿ ನೀರಿಗೆ ಬಿದ್ದಿದ್ದು ಆತನ ರಕ್ಷಣೆಗೆ ಹೋದ ಇನ್ನೋರ್ವ ಕೂಡ ಕೊಚ್ಚಿ ಹೋಗಿದ್ದ ಎನ್ನಲಾಗಿದೆ.  ಕಣ್ಮರೆಯಾದವರಿಗಾಗಿ ಶೋಧ ನಡೆಸಿದ್ದ ಗ್ರಾಮಸ್ಥರಿಗೆ ರಾತ್ರಿ ಬಳಿಕ ಇಬ್ಬರ ಶವಗಳು ಪತ್ತೆಯಾಗಿದೆ.
ಎರಡು ದಿನಗಳ ಹಿಂದೆ ಕಾರವಾರ ತಾಲೂಕಿನ ಅರ್ಗಾದಲ್ಲಿ ವೃದ್ಧೆಯೊಬ್ಬರು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement