ಬೆಂಗಳೂರು: 1 ತಿಂಗಳ ವರೆಗೆ ಪ್ರತಿದಿನ 2 ಗಂಟೆ ಕಾಲ ಈ ಮಾರ್ಗದ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಒಂದು ತಿಂಗಳ ಕಾಲ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ಪ್ರತಿ ದಿನ ಎರಡು ಗಂಟೆಗಳ ಕಾಲ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.
ಮೆಟ್ರೋ ರೈಲು ನಿಗಮವು ಜುಲೈ 10 ರಿಂದ ಆಗಷ್ಟ್​ 9ರ ವರೆಗೆ ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳನ್ನು ಸಂಪರ್ಕಿಸುವ ಸಿಗ್ನಲಿಂಗ್​ ಹಾಗೂ ಇತರ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಒಂದು ತಿಂಗಳ ಕಾಲ ಪ್ರತಿದಿನ ಬೆಳಿಗ್ಗೆ 5 ರಿಂದ ಬೆಳಿಗ್ಗೆ 7 ಗಂಟೆವರೆಗೂ ಈ ಮಾರ್ಗದ ರೈಲುಗಳ ಸೇವೆ ಸ್ಥಗಿತಗೊಳಿಸುತ್ತಿದೆ ಎಂದು ತಿಳಿಸಿದೆ.
ಬೈಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ರಸ್ತೆ, ಕೃಷ್ಣರಾಜಪುರ-ವೈಟ್​ಫೀಲ್ಡ್​(ಕಾಡುಗೋಡಿ) ನಡುವಿನ ರೈಲು ಸಂಚಾರವನ್ನು ಬೆಳಗ್ಗೆ 5 ರಿಂದ 7 ರ ವರೆಗೂ ಸ್ಥಗಿತವಾಗುತ್ತಿದೆ. ಬೆಳಗ್ಗೆ 7ರ ನಂತರ ನಂತರ ಈ ಮಾರ್ಗದ ರೈಲು ಸಂಚಾರವು ಎಂದಿನಂತೆ ರಾತ್ರಿ 11 ಗಂಟೆ ವರೆಗೆ ಇರಲಿದೆ. ಹಸಿರು ಬಣ್ಣದ ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement