ಇ.ಡಿ ನಿರ್ದೇಶಕರ 3ನೇ ಅಧಿಕಾರಾವಧಿ ವಿಸ್ತರಣೆ ಕಾನೂನುಬಾಹಿರ: ಸುಪ್ರೀಂ ಕೋರ್ಟ್

ನವದೆಹಲಿ : ಜಾರಿ ನಿರ್ದೇಶನಾಲಯ(ಇಡಿ)ದ ಮುಖ್ಯಸ್ಥರಾಗಿ ಸಂಜಯಕುಮಾರ ಮಿಶ್ರಾ ಅವರ ಅಧಿಕಾರಾವಧಿಯ ಮೂರನೇ ವಿಸ್ತರಣೆಯು “ಅಕ್ರಮ” ಮತ್ತು 2021 ರಲ್ಲಿ ತನ್ನ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಆದಾಗ್ಯೂ, ಸರ್ವೋಚ್ಚ ನ್ಯಾಯಾಲಯವು ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಅನುಮತಿ ನೀಡಿದೆ. ಅಲ್ಲದೆ, ವಿಸ್ತರಣೆಗೊಂಡಿದ್ದ ಅವರ ಅಧಿಕಾರಾವಧಿಯನ್ನು ಜುಲೈ 31ಕ್ಕೆ ಮೊಟಕುಗೊಳಿಸಿದೆ.
1984ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಮಿಶ್ರಾ ಅವರು ನವೆಂಬರ್ 18, 2023 ರವರೆಗೆ ಅಧಿಕಾರದಲ್ಲಿ ಇರಬೇಕಿತ್ತು ಎಂದು ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕೇಂದ್ರವು ತನಿಖಾ ಸಂಸ್ಥೆಗೆ ಹೊಸ ಮುಖ್ಯಸ್ಥರನ್ನು ನೇಮಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಎಸ್‌ಕೆ ಮಿಶ್ರಾ ಅವರ ವಿಸ್ತೃತ ಅವಧಿಯು 2021 ರ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಕಳೆದ ವರ್ಷ ನವೆಂಬರ್ 17 ರಂದು ಮೂರನೇ ಬಾರಿಗೆ ಮಿಶ್ರಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ವಿಕ್ರಮನಾಥ ಮತ್ತು ಸಂಜಯ ಕರೋಲ್ ಅವರ ಪೀಠವು ಸಂಜಯಕುಮಾರ ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಯು ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠದ 2021 ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ, ಇದರಲ್ಲಿ ನ್ಯಾಯಾಲಯವು ನವೆಂಬರ್ 2021 ರ ನಂತರ ಹೆಚ್ಚಿನ ವಿಸ್ತರಣೆಗಳನ್ನು ನಿರ್ಬಂಧಿಸಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

“ಕಾಮನ್ ಕಾಸ್ ತೀರ್ಪಿನಲ್ಲಿ, ನಿರ್ದಿಷ್ಟ ಆದೇಶವಿತ್ತು ಮತ್ತು ಮುಂದೆ ಯಾವುದೇ ವಿಸ್ತರಣೆ ಮಾಡಬಾರದು ಎಂದು ನಿರ್ದೇಶಿಸಲಾಗಿದೆ. ಹೀಗಾಗಿ, ತೀರ್ಪಿನ ನಂತರ ನೀಡಲಾದ ವಿಸ್ತರಣೆಗಳು ಕಾನೂನಿನಲ್ಲಿ ಅಸಿಂಧು” ಎಂದು ಸುಪ್ರೀಂ ಕೋರ್ಟ್ ಅವರ ಅಧಿಕಾರಾವಧಿ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ. .
ಆದಾಗ್ಯೂ, ಈ ವರ್ಷ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ನಡೆಸುತ್ತಿರುವ ಪೀರ್ ರಿವ್ಯೂ ಮತ್ತು ಸುಗಮ ಸ್ಥಿತ್ಯಂತರವನ್ನು ಸಕ್ರಿಯಗೊಳಿಸುವ ದೃಷ್ಟಿಯಿಂದ ಮಿಶ್ರಾ ಜುಲೈ 31 ರವರೆಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ನ್ಯಾಯಾಲಯ ಹೇಳಿದೆ.
ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರಾವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಜಾಗೃತ ಆಯೋಗ ಕಾಯ್ದೆ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಗೆ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.
ಡಿಸೆಂಬರ್ 12 ರಂದು ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಇತರರಿಂದ ನ್ಯಾಯಾಲಯ ಪ್ರತಿಕ್ರಿಯೆ ಕೇಳಿತ್ತು.
ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಜಯಾ ಠಾಕೂರ್ ಮತ್ತು ಟಿಎಂಸಿಯ ಮಹುವಾ ಮೊಯಿತ್ರಾ ಸಾಕೇತ್ ಗೋಖಲೆ ಅವರು ಸಲ್ಲಿಸಿದ ಅರ್ಜಿಗಳ ಮೇಲೆ ಪೀಠವು ತೀರ್ಪು ನೀಡಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement