ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಬೈಕ್ ಸ್ಕಿಡ್ ಆಗಿ ಇಬ್ಬರು ನದಿ ನೀರಿನಲ್ಲಿ ಸಿಲುಕಿದ್ದಾರೆ.
ಬೈಕ್ ಸವಾರರಾದ ಅವರಾದಿ ಗ್ರಾಮದ ಚನ್ನಪ್ಪ ಹರಿಜನ ( 38), ದುರ್ಗವ್ವ ಹರಿಜನ( 35 ) ನೀರು ಪಾಲಾಗಿದ್ದಾರೆ. ಮುಳುಗಿದವರ ಹುಡುಕಾಟ ನಡೆದಿದೆ. ಇಬ್ಬರು ವೈಯಕ್ತಿಕ ಕೆಲಸ ನಿಮಿತ್ತ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. ಘಟಪ್ರಭಾ ನದಿಗೆ ತಡಗೋಡೆ ಇಲ್ಲದ ಕಾರಣ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ನೀರಿಗೆ ಬಿದ್ದಿದ್ದಾರೆ. ಸದ್ಯ ಬೈಕ್ ನೀರಿನಲ್ಲಿ ಪತ್ತೆಯಾಗಿದೆ. ಮೂಡಲಗಿ ಹಾಗೂ ಕುಲಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ