ಚಾಮರಾಜನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷಕುಡಿಸಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವಿಗೀಡಾಗಿದೆ.
ತಾಯಿ ಹಾಗೂ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಗಿದೆ. ಮಧುವನಹಳ್ಳಿ ಗ್ರಾಮದ ಶೀಲಾ ಎಂಬವಳು ತನ್ನ ಮಕ್ಕಳಾದ ಸಿಂಧು (೯) ಹಾಗೂ ಯಶ್ವಂತ (೭) ವಿಷಕುಡಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಕ್ಕಳು ನರಳುತ್ತಿದ್ದುದನ್ನು ನೋಡುದ ಅಕ್ಕಪಕ್ಕದವರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಗಳು ಸಿಂಧು ಮೃತಪಟ್ಟಿದ್ದಾಳೆ. ತಾಯಿ ಶೀಲಾ ಹಾಗೂ ಮಗು ಯಶವಂತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ಒಯ್ಯಲಾಗಿದೆ.
ಪತಿ ಪ್ರತಿದಿನ ಕುಡಿದು ಬಂದು ಪತ್ನಿ ಶೀಲ ಹಾಗೂ ಮಕ್ಕಳಿಗೆ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಮಂಗಳವಾರವೂ ಈತ ಕುಡಿದುಬಂದು ಪತ್ನಿ ಹಾಗೂ ಮಕ್ಕಳಿಗೆ ಹೊಡೆದು ಹಿಂಸೆ ನೀಡಿದ್ದ ಎಂದು ಹೇಳಲಾಗಿದೆ. ಇದರಿಂದ ಮನನೊಂದ ತಾಯಿ ಶೀಲಾ ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ