ಜೈಪುರ: ರಾಜಸ್ಥಾನದ ಭರತಪುರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೊಲೆ ಪ್ರಕರಣದ ಆರೋಪಿ ಗ್ಯಾಂಗ್ಸ್ಟರ್ ಕುಲದೀಪ್ ಜಘೀನಾ ಎಂಬಾತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ದುಷ್ಕರ್ಮಿಗಳು ಪೊಲೀಸರ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆಕೋರನನ್ನು ಗುಂಡಿಕ್ಕಿ ಕೊಂದಿದ್ದಾರೆ.
ಪೊಲೀಸರು ಗ್ಯಾಂಗ್ಸ್ಟರ್ ಕುಲದೀಪ್ ಜಘೀನಾನನ್ನು ಜೈಪುರ ಜೈಲಿನಿಂದ ಭರತಪುರ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಅಮೋಲಿ ಟೋಲ್ ಪ್ಲಾಜಾ ಬಳಿ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಮೃತ ಕುಲದೀಪ್ ಕೊಲೆ ಪ್ರಕರಣದ ಆರೋಪದಲ್ಲಿ ಜೈಲ್ಲಿನಲ್ಲಿದ್ದ. ಪೊಲೀಸ್ ಕಸ್ಟಡಿಯಲ್ಲಿ ಕೊಲೆ ಆರೋಪಿಯ ಸಾವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.
ಶೂಟೌಟ್ ಮಾಡಿದ ಆರೋಪಿಗಳ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜೆಪಿ ನಾಯಕ ಕೃಪಾಲ್ ಜಘೀನಾ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಗ್ಯಾಂಗ್ ಸ್ಟರ್ ಕುಲದೀಪ್ ಜಘಿನಾನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ. ಬಿಜೆಪಿ ನಾಯಕನನ್ನು ಸೆಪ್ಟೆಂಬರ್ 4, 2022 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಈ ಕೊಲೆ ಪ್ರಕರಣದಲ್ಲಿ ಕುಲದೀಪ್ ಜಘೀನಾ ಜೈಲು ಸೇರಿದ್ದ.
ನಿಮ್ಮ ಕಾಮೆಂಟ್ ಬರೆಯಿರಿ