ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.
ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ ಹಾಗೂ ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ.
ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಈ ಸಹಕಾರಿ ಬ್ಯಾಂಕಿಗೆ 100 ವರ್ಷದ ಇತಿಹಾಸವಿದೆ.
ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ ಸಿಂಗ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತರು. ಇದರಿಂದ ಆನಂದ್ ಸಿಂಗ್ ಅವರಿಗೆ ತೀವ್ರ ಮುಖಭಂಗವಾಗಿತ್ತು. ಈಗ ಅವರು ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ