ಬಿಜೆಪಿ ಕಾರ್ಯಕರ್ತನ ಅಪಹರಣ; ಮುಖದ ಮೇಲೆ ಮೂತ್ರ ವಿಸರ್ಜಿಸಿ ಕ್ರೌರ್ಯ ಮೆರೆದ ಟಿಎಂಸಿ ಕಾರ್ಯಕರ್ತರು : ವರದಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಟಿಎಂಸಿ ಮುಖಂಡರು ಬಿಜೆಪಿ ಕಾರ್ಯಕರ್ತನನ್ನು ಅಪಹರಿಸಿ, ಮುಖದ ಮೇಲೆ ಮೂತ್ರ ಮಾಡಿದ ಘಟನೆ ವರದಿಯಾಗಿದೆ.
ವರದಿ ಪ್ರಕಾರ, ಗುರುವಾರ ರಾತ್ರಿ, ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಪೋಲಿಂಗ್ ಏಜೆಂಟ್ ಆಗಿದ್ದ ಬಿಜೆಪಿ ಕಾರ್ಯಕರ್ತನನ್ನು ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಅಪಹರಿಸಿ ಗಾರ್ಬೆಟಾದಲ್ಲಿನ ಪಕ್ಷದ ಸ್ಥಳೀಯ ಕಚೇರಿಗೆ ಕರೆದೊಯ್ದರು, ಅಲ್ಲಿ ಚಿತ್ರಹಿಂಸೆ ನೀಡಲಾಯಿತು ಮತ್ತು ಅವಮಾನ ಮಾಡಲಾಯಿತು. ನಂತರ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಲಾಯಿತು. ಶುಕ್ರವಾರ ತಡರಾತ್ರಿ ಬಿಜೆಪಿ ಕಾರ್ಯಕರ್ತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
ಬಿಜೆಪಿ ಉಪಾಧ್ಯಕ್ಷ ಸಮಿತ್ ದಾಸ್ ನೇತೃತ್ವದ ಬಿಜೆಪಿ ನಿಯೋಗ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ತೆರಳಿ ಬಿಜೆಪಿ ಕಾರ್ಯಕರ್ತನನ್ನು ಭೇಟಿಯಾದಾಗ ಆತ ತನ್ನ ಸಂಕಷ್ಟವನ್ನು ವಿವರಿಸಿದ್ದಾನೆ.
ತೃಣಮೂಲ ಕಾಂಗ್ರೆಸ್‌ನ ಗೂಂಡಾಗಳು ತಮ್ಮ ವಿಜಯೋತ್ಸವವನ್ನು ಆಚರಿಸಲು ನಮ್ಮ ಪಕ್ಷದ ಕಾರ್ಯಕರ್ತನಿಗೆ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ತೀರಾ ಬಡವನಾಗಿದ್ದ ಆತ ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರಿಗೆ ಸಿಟ್ಟು ಬಂತು. ನಂತರ ಬಿಜೆಪಿ ಕಾರ್ಯಕರ್ತನನ್ನು ಅಪಹರಿಸಿ ಸ್ಥಳೀಯ ಪಕ್ಷದ ಕಚೇರಿಗೆ ಕರೆದೊಯ್ಯಲಾಯಿತು. ಮೊದಲಿಗೆ ಆತನಿಗೆ ತೀವ್ರವಾಗಿ ಥಳಿಸಲಾಯಿತು. ನಂತರ ಆತ ನೀರು ಕೇಳಿದಾಗ ದುಷ್ಕರ್ಮಿಗಳು ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ. ನಾವು ಈ ವಿಷಯದ ಬಗ್ಗೆ ದೊಡ್ಡ ಚಳವಳಿ ಮಾಡುತ್ತೇವೆ ಎಂದು ದಾಸ್ ಆಸ್ಪತ್ರೆಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಆದಾಗ್ಯೂ, ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಪಶ್ಚಿಮ ಮಿಡ್ನಾಪುರದ ಪಕ್ಷದ ಜಿಲ್ಲಾ ಸಂಯೋಜಕ ಅಜಿತ್ ಮೈತಿ ಅವರು ಆರೋಪಗಳನ್ನು ತಳ್ಳಿಹಾಕಿದ್ದಾರೆ, “ಗರ್ಬೆಟಾ ಪ್ರದೇಶದಲ್ಲಿ ಚುನಾವಣೆಗಳು ಸಂಪೂರ್ಣವಾಗಿ ಶಾಂತಿಯುತವಾಗಿವೆ. ಯಾವುದೇ ರೀತಿಯ ಉದ್ವಿಗ್ನತೆಯನ್ನು ತಪ್ಪಿಸಲು ನಾವು ವಿಜಯೋತ್ಸವವನ್ನು ಸೀಮಿತ ಮತ್ತು ಶಾಂತ ರೀತಿಯಲ್ಲಿ ಆಯೋಜಿಸಿದ್ದೇವೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಬಿಜೆಪಿ ಈಗ ಕಥೆಗಳನ್ನು ಹೆಣೆಯುತ್ತಿದೆ ಎಂದು ಮೈತಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement