ಉಡುಪಿ : ಟಿಪ್ಪರಿನ ಹಿಂಬದಿಯ ಡಂಪರ್ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರದ ವರೆಗೆ ಟಿಪ್ಪರ್ ಎಳೆದೊಯ್ದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. , ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾತವಾಗಿದೆ. ಆಗ ಕಾರಿ ಟಿಪ್ಪರ್ ಹಿಂಬದಿಯ ಡಂಪರ್ಗೆ ಸಿಲುಕಿಕೊಂಡಿದೆ. ಅಪಘಾತ ಆಗುತ್ತಿದ್ದಂತೆಯೇ ಟಿಪ್ಪರ್ ಚಾಲಕ ವಾಹನ ನಿಲ್ಲಿಸುವ ಬದಲು ವಾಹನದ ವೇಗವನ್ನು ಹೆಚ್ಚಿಸಿದ್ದಾನೆ.
ಸಾರ್ವಜನಿಕರು ತನಗೆ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ. ದರೆ ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿಕೊಂಡಿರುವ ವಿಚಾರ ಚಾಲಕನಿಗೆ ಆತನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದ ಸಾರ್ವಜನಿಕರು ಬೊಬ್ಬೆ ಹೊಡೆದ ಟಿಪ್ಪರ್ ಅನ್ನು ನಿಲ್ಲಿಸಿದ್ದಾರೆ.
ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ