​ಸ್ವೀಕರ್ ಖಾದರ್‌ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್​

ಬೆಂಗಳೂರು : 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್​ ಅಲ್ಲಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸ್ವೀಕರ್‌ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್​ ನೋಟಿಸ್‌ ನೀಡಿವೆ.
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ.
ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾಗಿರುವ ಸಭಾಧ್ಯಕ್ಷರು ಸದನದ ವಿಶ್ವಾಸ ಕಳೆದುಕೊಂಡಿರುವ ಕಾರಣ ಅವರನ್ನು ಈ ಸ್ಥಾನದಿಂದ ತಅವರನ್ನು ಪದಚ್ಯುತಗೊಳಿಸಬೇಕು ಮತ್ತು 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಅನ್ವಯ ಅವಕಾಶ ನೀಡಬೇಕು ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಕೋರಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement