ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಹುಬ್ಬಳ್ಳಿ ರಸ್ತೆ ಮಿಲನ್ ಹೋಟೆಲ್ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿದ ಪರಿಣಾಮ ಚಾಲಕ ಸಾವಿಗೀಡಾಗಿ, 25 ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು. ಅಪಘಾತದಲ್ಲಿ ಬಸ್ ಚಾಲಕ ಮಂಡ್ಯ ಮೂಲದ ಕಿರಣಕುಮಾರ (25) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಹುಬ್ಬಳ್ಳಿಯ ಹೈಟೆಕ್ ಆಸ್ಪತ್ರೆಗೆ ಒಯ್ಯಲಾಗಿದೆ. ಉಳಿದ ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ವಿದ್ಯುತ್ ಕಂಬ ಸಹ ಉರುಳಿದೆ. ಬಸ್ ಸಹ ರಸ್ತೆಯ ಮೇಲೆಯೇ ಪಲ್ಟಿಯಾಗಿ ಬಿದ್ದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಸಮಸ್ಯೆಯಾಗಿತ್ತು. ನಂತರ ಪೊಲೀಸರು ರಸ್ತೆ ಪಕ್ಕದಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ