ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟ ಘಟನೆ ನಗರದ ದುಬೈ ಕಾಲೋನಿ ಎಂಬಲ್ಲಿ ನಡೆದ ವರದಿಯಾಗಿದೆ.
ಸಂಜಯ ಗಾಂಧಿ ನಗರದ ಅಭಿಷೇಕ (12) ಮತ್ತು ಅಜಯ (12) ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ.
ದುಬೈ ಕಾಲೋನಿಯ ಚೈಲ್ಡ್ ಹುಡ್ ಆಸ್ಪತ್ರೆಯ ಮುಂದೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕಾಗಿ ತಗ್ಗು ತೋಡಲಾಗಿದೆ. ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹೀಗಾಗಿ ತಗ್ಗುಗುಂಡಿ ಸಂಪೂರ್ಣ ತುಂಬಿದೆ.
ನಿನ್ನೆ (ಜು.22) ಮಧ್ಯಾಹ್ನದಿಂದ ಬಾಲಕರು ನಾಪತ್ತೆಯಾಗಿದ್ದರು. ಆಟವಾಡಲು ಹೋದಾಗ ಕಾಲುಜಾರಿ ತಗ್ಗು ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸುದ್ದಿ ತಿಳಿದು ಚೌಕ್ ಪೊಲೀಸ್ ಠಾಣೆ ಪಿಐ ರಾಜಶೇಖರ ಹಳಿಗೋದಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement