ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಿದ ಆರೋಪ ; ‘ಇಂಡಿಯಾ’ ಮೈತ್ರಿ ಪಕ್ಷದ ಸದಸ್ಯರಿಂದ ಸಭಾತ್ಯಾಗ

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಲಾಗಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆ ಖಂಡಿಸಿ ಇಂದು ಮಂಗಳವಾರ ಸಭಾತ್ಯಾಗ ಮಾಡಿದವು.
ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಲಾಗಿತ್ತು. ಈ ಘಟನೆಗೆ ಪ್ರತಿಭಟನೆ ವ್ಯಕ್ತಪಡಿಸಿ ‘ಇಂಡಿಯಾ’ ಒಕ್ಕೂಟದ ಸದಸ್ಯರು ಸಭಾತ್ಯಾಗ ಮಾಡಿದರು” ಎಂದು ಅವರು ತಿಳಿಸಿದ್ದಾರೆ.
ಮಣಿಪುರದ ವಿದ್ಯಮಾನದ ಕುರಿತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪಡೆಯಲು ‘ಇಂಡಿಯಾ’ ಒಕ್ಕೂಟ ಮಂಡಿಸಿದ ಬೇಡಿಕೆಯನ್ನು ತಡೆಯಲು ಖರ್ಗೆ ಅವರ ಮೈಕ್ರೋಫೋನ್‌ ಅನ್ನು ಸ್ವಿಚ್ಡ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ ರಮೇಶ ಆರೋಪಿಸಿದ್ದಾರೆ.
ಬಿಜೆಪಿ ಸದಸ್ಯರ ಪ್ರಚೋದನೆಯಿಂದ ಸ್ವತಃ ಸಭಾನಾಯಕರೇ ಪದೇ ಪದೇ ಅಡ್ಡಿಪಡಿಸಿದರು. ಗದ್ದಲದಲ್ಲಿಯೇ ಮಸೂದೆಗಳನ್ನು ಮಂಡಿಸಲಾಯಿತು. ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಇಂಡಿಯಾ’ ಸದಸ್ಯರು ಸಭಾತ್ಯಾಗ ಮಾಡಿದರು ಎಂದವರು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಣಿಪುರ ಹಿಂಸಾಚಾರದ ಬಗ್ಗೆ ವಿವರವಾದ ಚರ್ಚೆಗೆ ಮತ್ತು ಈಶಾನ್ಯ ರಾಜ್ಯದ ಸಮಸ್ಯೆಯ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಸದನದಲ್ಲಿ ಪಟ್ಟು ಹಿಡಿದಿದ್ದಾರೆ.

ಪ್ರಮುಖ ಸುದ್ದಿ :-   ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement