ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಸದಸ್ಯರ ಪ್ರತಿಭಟನೆ ನಡುವೆಯೇ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲದೆ, ಸದನವು ಅರಣ್ಯ (ಸಂರಕ್ಷಣೆ) ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಅಂಗೀಕರಿಸಿತು. ಸದನದ ಕಲಾಪವನ್ನು ಗುರುವಾರಕ್ಕೆ ಮುಂದೂಡುವ ಮೊದಲು, ಲೋಕಸಭೆಯು ಸಂಕ್ಷಿಪ್ತ ಚರ್ಚೆಯ ನಂತರ ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು.
ಬೆಳಿಗ್ಗೆ ಕಲಾಪ ಆರಂಭವಾಗುತ್ತಲೇ, ಮಣಿಪುರ ಹಿಂಸಾಚಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ ವಿಪಕ್ಷಗಳು, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದವು. ಇದನ್ನು ಸ್ಪೀಕರ್ ಓಂ ಬಿರ್ಲಾ ಅವರು ಒಪ್ಪಿಕೊಂಡರು.
ಸದನ ಸೇರಿದಾಗ ಮೊದಲಿಗೆ, ಸದಸ್ಯರು ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಪ್ರತಿಭಟನೆಗಳು ಪ್ರಾರಂಭವಾಯಿತು. ಪ್ರಶ್ನೋತ್ತರ ವೇಳೆಯಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿಷಯ ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಅವಿಶ್ವಾಸ ಗೊತ್ತುವಳಿ ಮಂಡನೆಯಾದ ನಂತರ ಎರಡನೇ ಬಾರಿ ಕಲಾಪ ಮುಂದೂಡಲಾಯಿತು ಮತ್ತು ಪ್ರತಿಭಟನೆಯ ಮಧ್ಯೆಯೇ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ಸೇರಿದಂತೆ ಆರು ಮಸೂದೆಗಳನ್ನು ಮಂಡಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ