ಆಗಸ್ಟ್‌ 2ರಂದು ರಾಜ್ಯ ನಾಯಕರ ಜೊತೆ ಕಾಂಗ್ರೆಸ್‌ ಹೈಕಮಾಂಡ್‌ ಸಭೆ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಅಸಮಾಧಾನದ ಬೆನ್ನಲ್ಲೇ, ಹೈಕಮಾಂಡ್‌ ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಯೋಜಿಸಿದೆ.
ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಸಹ ಭಾಗವಹಿಸಲಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಅವರಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೆ ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಎಲ್ಲ ಸಚಿವರ ಜತೆಗೆ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ಸಭೆ ಈ ಮೊದಲೇ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಈ ಸಭೆ ರದ್ದಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement