ಕಲಬುರಗಿ: ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ತಾಕೀತು ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಮಂಗಳವಾರ ಕಲಬುರಗಿ-ಬಸವಕಲ್ಯಾಣ ಮಾರ್ಗದ ಕಮಲಾಪುರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿನಿಯೊಬ್ಬಳು ಬಸವಕಲ್ಯಾಣಕ್ಕೆ ಹೋಗುವ ಬಸ್ ಹತ್ತಿದ್ದ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ ಎಂದು ಹೇಳಿ ಬಸ್ನಿಂದ ಕೆಳಗಿಳಿಸಿದ್ದ ಎಂಭ ಆರೋಪ ಕೇಳಿಬಂದಿತ್ತು. ಈ ಘಟನೆಯ ವೀಡಿಯೊವನ್ನು ವಿದ್ಯಾರ್ಥಿನಿಯರು ಓದುತ್ತಿರುವ ಅದೇ ಶಾಲೆಯ ಶಿಕ್ಷಕರೊಬ್ಬರು ರೆಕಾರ್ಡ್ ಮಾಡಿದ್ದರು. ವೀಡಿಯೊ ವೈರಲ್ ಆದ ನಂತರ ಚಾಲಕನ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದವು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಕೆಕೆಆರ್ಟಿಸಿ, ಬುಧವಾರ ಮತ್ತು ಗುರುವಾರ ಘಟನೆ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಮಹೆಬೂಬ್ ಸಾಬ್ ಮತ್ತು ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡಿದೆ. ಹೇಳಿಕೆ ವೇಳೆ ಚಾಲಕ ಆರೋಪವನ್ನು ನಿರಾಕರಿಸಿದ್ದಾನೆ. ಆದರೆ, ಅವರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಮಹೆಬೂಬಸಾಬ್ ಅವರನ್ನು ಅಧಿಕಾರಿಗಳು ಅಮಾನತುಗೊಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ