ಕೊಪ್ಪಳ: ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿದ್ದಾರೆ. ಅವರ ಅಪ್ಪಂದಿರ ಜೊತೆ ನಾನು ಕೆಲಸ ಮಾಡಿದವ. ಈಗ ಇವರು ನಮ್ಮ ಮುಂದೆ ಧಿಮಾಕು ತೋರಿಸಿಕೊಂಡು ಓಡಾಡುತ್ತಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಜನಸಂರ್ಪಕ ಸಭೆಯಲ್ಲಿ ಮಾತನಾಡಿದ ಅವರು, “ನೀವು ಚಿಂತೆ ಮಾಡುವುದು ಬೇಡ. ಒಮ್ಮೊಮ್ಮೆ ಮಂತ್ರಿ ಆಗಲು ಸಾಧ್ಯವಾಗುವುದಿಲ್ಲ. ಅದಕ್ಕೆ ಹಣೆಬರಹ ಬೇಕಾಗುತ್ತದೆ ಎಂದು ಹೇಳಿದರು.
ನಮ್ಮ ಸಿದ್ದರಾಮಯ್ಯ ಅವರನ್ನು ನೋಡಿ, ಕಾಂಗ್ರೆಸ್ಗೆ ಬಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. ಮೂಲಕ ಕಾಂಗ್ರೆಸ್ ಮಂದಿ ಈಗ ಏನು ಹೇಳುತ್ತಿರಬಹುದು? ಇವೆಲ್ಲ ಮನುಷ್ಯನ ಅದೃಷ್ಟ ಎಂದರು. ದೇವೆಗೌಡರ ಕ್ಯಾಬಿನೆಟ್ನಲ್ಲಿ ನಾನು ಮಂತ್ರಿಯಾಗಿದ್ದೆ. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲಲು ಹಿಂದೆ ಮುಂದೆ ನೋಡುತ್ತಿದ್ದರು. ಆದರೆ ಅವರ ಹಣೆಬರಹದಲ್ಲಿ ಮುಖ್ಯಮಂತ್ರಿ ಆಗುವುದು ಬರೆದಿತ್ತು. ಎರಡು ಬಾರಿ ಮುಖ್ಯಮಂತ್ರಿಯಾದರು. ಪಾಪ ಎಲ್.ಕೆ. ಅಡ್ವಾಣಿ ಅವರು ಬಿಜೆಪಿ ಕಟ್ಟಿದರು. ಆದರೆ ಪ್ರಧಾನಿಯಾದದ್ದು ನರೇಂದ್ರ ಮೋದಿ ಎಂದು ಮಾರ್ಮಿಕವಾಗಿ ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ