ಹಾಸನ: ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತನ ಬರ್ಬರ ಹತ್ಯೆ

ಹಾಸನ : ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಆಪ್ತ ಹಾಗೂ ಗ್ರಾನೈಟ್‌ ಉದ್ಯಮಿಯನ್ನು ಹಾಸನದಲ್ಲಿ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಕೃಷ್ಣೇ ಗೌಡ (53) ಎಂಬವರನ್ನು ಹಾಸನ ನಗರದ ಹೊರವಲಯದ ಕೈಗಾರಿಕೆ ಪ್ರದೇಶದಲ್ಲಿ ದುಷ್ಕರ್ಮಿಗಳು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೃಷ್ಣೇಗೌಡರನ್ನು ಅವರ ಗ್ರ್ಯಾನೈಟ್ ಕಾರ್ಖಾನೆಯ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಘಟಕದ ಮುಂದೆ ಇನ್ನೋವಾ ಕಾರನ್ನು ನಿಲ್ಲಿಸಿ ಗ್ರಾನೈಟ್ ಘಟಕಕ್ಕೆ ಹೋಗುತ್ತಿದ್ದಾಗ ಐವರ ತಂಡ ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿ ಶ್ವಾನದಳ ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ. ಆರೋಪಿಗಳ ಸೆರೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement