ಗಂಡನ ಸಾವಿನ ದಿನವೇ ಮಗನೊಂದಿಗೆ ಕೆರೆಗೆ ಹಾರಿದ ತಾಯಿ

ಆನೇಕಲ್: ಗಂಡ ತೀರಿಕೊಂಡ ಎರಡು ವರ್ಷಗಳ ಬಳಿಕ ಅದೇ ದಿನವೇ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಗೆ ಬಳಿ ತಾಯಿ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಿ.ಕೆ. ಪಾಳ್ಯದ ನಿವಾಸಿಗಳಾದ ತಾಯಿ ವಿಜಯಲಕ್ಷ್ಮೀ (35) ಹಾಗೂ ಪುತ್ರ ಹರಿಹರನ್ (7) ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶ ಮೂಲದ ಕುಟುಂಬ ಕೆಲ ವರ್ಷಗಳಿಂದ ಸಿ.ಕೆ. ಪಾಳ್ಯದಲ್ಲಿ ವಾಸವಿತ್ತು. ಅವರ ಪತಿ ಮೊಬೈಲ್‌ ಅಂಗಡಿ ನಡೆಸುತ್ತಿದ್ದರು. 2 ವರ್ಷದ ಹಿಂದೆ ಅಪಘಾತದಲ್ಲಿ ವಿಜಯಲಕ್ಷ್ಮೀ ಅವರ ಪತಿ ಮೃತಪಟ್ಟಿದ್ದರು. ಇದರ ನಂತರ ವಿಜಯಲಕ್ಷ್ಮೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಪತಿ ತೀರಿಕೊಂಡು ಆಗಸ್ಟ್‌ 13ಕ್ಕೆ ಸರಿಯಾಗಿ 2 ವರ್ಷ ಕಳೆದಿದ್ದು, ಪತಿ ಮೃತಪಟ್ಟ ಮಗುವಿನ ಜತೆಗೆ ವಿಜಯಲಕ್ಷ್ಮೀ ಸಾವಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಹೊರತೆಗೆಯಲಾಗಿದೆ

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement