ಶಕ್ತಿ ಯೋಜನೆ ಸ್ಥಗಿತದ ಊಹಾಪೋಹ: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ರದ್ದತಿ ಬಗ್ಗೆ ನಕಲಿ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ” ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎನ್ನುವುದು ಸುದ್ದಿ ಸುಳ್ಳು. ಶಕ್ತಿ ಯೋಜನೆ 10 ವರ್ಷಗಳ ಕಾಲ ಮುಂದುವರಿಯಲಿದೆ” ಎಂದರು.
ಶಕ್ತಿ ಯೋಜನೆಯ ಬಗ್ಗೆ ಒಂದು ಪಕ್ಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಶಕ್ತಿ ಯೋಜನೆ ನಿಲ್ಲುವುದಿಲ್ಲ ಹಾಗೂ ಮಹಿಳೆಯರು ಪಾಸ್ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಸಚಿವರು ತಿಳಿಸಿದ್ದಾರೆ.
ಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರ ರದ್ದು ಮಾಡಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿತ್ತು. ಅಲ್ಲದೆ ಆಗಸ್ಟ್‌ 15 ರಿಂದ ಶಕ್ತಿ ಯೋಜನೆ ರದ್ದು ಎಂಬ ಪೋಸ್ಟ್‌ ಕೂಡಾ ವೈರಲ್‌ ಆಗಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement