ತನ್ನ ಸಹೋದರ, ಆತನ ಪತ್ನಿಯ ಆತ್ಮಹತ್ಯೆ ತನಿಖೆಯ ವಿಳಂಬ ಖಂಡಿಸಿ ಕೈಬೆರಳು ಕತ್ತರಿಸಿಕೊಂಡ ವ್ಯಕ್ತಿ

ಮುಂಬೈ: ತನ್ನ ಸಹೋದರ ಮತ್ತು ಆತನ ಪತ್ನಿ ಆತ್ಮಹತ್ಯೆಗೆ ದೂಡಿದ ಅಪರಾಧಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, 43 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕ್ಯಾಮೆರಾದ ಮುಂದೆ ತಮ್ಮ ಬೆರಳನ್ನು ಕತ್ತರಿಸಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿ ವಾರ ದೇಹದ ಭಾಗ ಕತ್ತರಿಸಿಕೊಳ್ಳುತ್ತೇನೆ ಎಂದು ಧನಂಜಯ ನಾನಾವರೆ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಫಲ್ತಾನ್ ಪಟ್ಟಣದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂದಕುಮಾರ ನಾನಾವರೆ ಮತ್ತು ಅವರ ಪತ್ನಿ ಉಜ್ವಲಾ ನಾನಾವರೆ ಕಳೆದ ತಿಂಗಳು ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.
ವೀಡಿಯೊದಲ್ಲಿ ಧನಂಜಯ ಅವರು ಈ ಪ್ರಕರಣದಲ್ಲಿ “ಸಚಿವ” ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ಸಾಯುವ ಮೊದಲು ನನ್ನ ಸಹೋದರ ಅವರ ಹೆಸರನ್ನು ಹೇಳಿದ್ದಾನೆ, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಧನಂಜಯ ಆರೋಪಿಸಿದ್ದಾರೆ.
ತನಗೆ ನ್ಯಾಯ ಸಿಗುವವರೆಗೂ ಪ್ರತಿವಾರ ದೇಹದ ಅಂಗಾಂಗ ಕತ್ತರಿಸಿ ಸರ್ಕಾರಕ್ಕೆ ಕಳುಹಿಸುತ್ತೇನೆ ಎಂದು ಕಠಾರಿಯಿಂದ ಬೆರಳನ್ನು ಕತ್ತರಿಸಲು ಮುಂದಾಗಿದ್ದಾರೆ.
ನಂತರ, ಫಾಲ್ತಾನ್ ನಗರ ಪೊಲೀಸ್ ಠಾಣೆಗೆ ಬಂದು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆತನನ್ನು ಈಗ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement