ನವದೆಹಲಿ: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಐಕಾನ್ ರಾಜೀವ್ ಗಾಂಧಿ ಅವರ ಜನ್ಮದಿನದಂದು, ಕಾಂಗ್ರೆಸ್ ಪಕ್ಷವು ಇಂದು, ಭಾನುವಾರ ತನ್ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ರಚಿಸಿದೆ. ಸಚಿನ್ ಪೈಲಟ್ ಮತ್ತು ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯೂಸಿ) ಸೇರ್ಪಡೆ ಮಾಡಲಾಗಿದೆ.
ಸಚಿನ್ ಪೈಲಟ್, ಶಶಿ ತರೂರ್ (ಕಳೆದ ವರ್ಷ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು) ಅವರಲ್ಲದೆ. ದೀಪಾ ದಾಸ್ ಮುನ್ಷಿ ಮತ್ತು ಸೈಯದ್ ನಾಸರ್ ಹುಸೇನ್ ಅವರು ಸಹ ಸಿಡಬ್ಲ್ಯೂಸಿಗೆ ಹೊಸ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಅಲ್ಕಾ ಲಂಬಾ, ಸುಪ್ರಿಯಾ ಶ್ರೀನಾಟೆ, ಪ್ರಣತಿ ಶಿಂಧೆ, ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ದೀಪಾ ದಾಸ್ ಮುನ್ಷಿ ಅವರು ಪಶ್ಚಿಮ ಬಂಗಾಳದಮಾಜಿ ಕೇಂದ್ರ ಸಚಿವ, ದಿವಂಗತ ಪ್ರಿಯಾ ರಂಜನ್ ದಾಸ್ ಮುನ್ಷಿ ಅವರ ಪತ್ನಿ. ಸೈಯದ್ ನಾಸರ್ ಹುಸೇನ್ ರಾಜ್ಯಸಭಾ ಸದಸ್ಯರಾಗಿದ್ದಾರೆ, ಅವರು ಈ ಹಿಂದೆ ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಪ್ಯಾನೆಲಿಸ್ಟ್ ಆಗಿ ಸೇವೆ ಸಲ್ಲಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಸ್ಥಾನದ ನಾಯಕ ಸಚಿನ್ ಪೈಲಟ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ತಮ್ಮದೇ ಪಕ್ಷದ ಸರ್ಕಾರವನ್ನು ಬಹಿರಂಗವಾಗಿ ಮುಜುಗರಕ್ಕೀಡು ಮಾಡಿದ್ದ ಅವರನ್ನು ಸಮಾಧಾನಪಡಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಸಚಿನ್ ಪೈಲಟ್ ಅವರನ್ನು ದೊಡ್ಡ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಕಾಂಗ್ರೆಸ್ನ ಕಾರ್ಯಕಾರಿ ಪಕ್ಷದ ಅಧಿಕಾರ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಪಕ್ಷದ ಸಂವಿಧಾನದ ವ್ಯಾಖ್ಯಾನ ಮತ್ತು ಅನುಷ್ಠಾನದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ.
ಸಿಡಬ್ಲ್ಯೂಸಿಯಲ್ಲಿ 39 ಕಾಂಗ್ರೆಸ್ನ ಪ್ರಮುಖರು…
ಪುನರ್ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಚಿನ್ ಪೈಲಟ್ ಮತ್ತು ಶಶಿ ತರೂರ್ ಸೇರಿದಂತೆ 39 ಸದಸ್ಯರನ್ನು ಒಳಗೊಂಡಿದೆ. ಸಚಿನ್ ಪೈಲಟ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಬಿಕ್ಕಟ್ಟನ್ನು ತಣ್ಣಗಾಗಿಸುವ ಪ್ರಯತ್ನದಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಸಮಿತಿಗೆ ಸಚಿನ್ ಪೈಲಟ್ ಅವರನ್ನು ಸೇರ್ಪಡೆಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಗೆಹ್ಲೋಟ್ ಮತ್ತು ಪೈಲಟ್ ಪರಸ್ಪರ ಗದ್ದುಗೆಯ ಹೋರಾಟದಲ್ಲಿ ತೊಡಗಿದ್ದರು. 2020 ರಲ್ಲಿ, ಪೈಲಟ್ ಅವರು ಗೆಹ್ಲೋಟ್ ಆಡಳಿತದ ವಿರುದ್ಧ ಬಂಡಾಯವೆದ್ದರು, ಇದು ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಹೊರಹಾಕಲು ಕಾರಣವಾಯಿತು.
2020 ರಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದ 23 ನಾಯಕರ ಗುಂಪಿನ ಭಾಗವಾಗಿದ್ದ ಶಶಿ ತರೂರ್, ಆನಂದ್ ಶರ್ಮಾ ಮತ್ತು ಮುಕುಲ್ ವಾಸ್ನಿಕ್ ಹೊಸ CWC ಯ ಸಾಮಾನ್ಯ ಸದಸ್ಯರಲ್ಲಿ ಸೇರಿದ್ದಾರೆ. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಪ್ರತಿಭಾ ಸಿಂಗ್ ಅವರನ್ನೂ ಪ್ರಮುಖ ಸಮಿತಿಯಲ್ಲಿ ಸೇರಿಸಲಾಗಿದೆ.
ಕಳೆದ ವರ್ಷ ಅಕ್ಟೋಬರ್ 10 ರಂದು ಖರ್ಗೆ ಪಕ್ಷದ ಅಧ್ಯಕ್ಷರಾದ ತಿಂಗಳ ನಂತರ ಸಿಡಬ್ಲ್ಯೂಸಿಅನ್ನು ರಚಿಸಲಾಯಿತು ಮತ್ತು ಸ್ಟಾಪ್-ಗ್ಯಾಪ್ ವ್ಯವಸ್ಥೆಯಾಗಿ ರಚಿಸಲಾದ ಸ್ಟೀರಿಂಗ್ ಸಮಿತಿಯನ್ನು ಬದಲಾಯಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ