ಪ್ರೇಮಿ ವಿರುದ್ಧ ಅತ್ಯಾಚಾರ ಪ್ರಕರಣ : ಸಾಕ್ಷ್ಯ ಹೇಳಲು ನಿರಾಕರಿಸಿದ ಗರ್ಭಿಣಿ ಮಗಳನ್ನು ಸಾಯಿಸಿದ ಪೋಷಕರು

ಮುಜಫ್ಫರನಗರ: ತನ್ನ ಪ್ರೇಮಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ನಿರಾಕರಿಸಿದ ಕಾರಣಕ್ಕೆ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರೇ ಕತ್ತು ಹಿಸುಕಿ ಸಾಯಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಪ್ರೇಮಿಯ ವಿರುದ್ಧ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯ ಹೇಳಲು ಆಕೆ ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪೋಷಕರು ನೀಡಿದ್ದ ದೂರಿನಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎದುರು 19 ವರ್ಷದ ಯುವತಿ ತನ್ನ ಸಂಗಾತಿ ವಿರುದ್ಧ ಸುಳ್ಳು ಹೇಳಿಕೆ ನೀಡಲು ನಿರಾಕರಿಸಿದ್ದಳು. ಇದಕ್ಕಾಗಿ ಆಕೆಯ ಪೋಷಕರೇ ಅವಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದ ಯುವತಿ ಮತ್ತು ಆಕೆಯ ಪ್ರೇಮಿ ರಾಹುಲ್ ಇಬ್ಬರೂ 2022ರ ಅಕ್ಟೋಬರ್‌ನಲ್ಲಿ ಪರಾರಿಯಾಗಿದ್ದರು. ಅವರನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪತ್ತೆ ಮಾಡಲಾಗಿತ್ತು. ನಂತರ ದೂರಿನ ಅನ್ವಯ ಯುವಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.

ನಂತರ ತಮ್ಮ ಮಗಳನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಈ ಯುವಕನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದರು. ಈ ವೇಳೆ ಆಕೆ ಗರ್ಭಿಣಿ ಆಗಿದ್ದಳು.
ಆದರೆ ಕೆ ತನ್ನ ಪ್ರೇಮಿಯ ವಿರುದ್ಧ ಸುಳ್ಳು ಹೇಳಿಕೆ ನೀಡಲು ನಿರಾಕರಿಸಿದ ನಂತರ ಶುಕ್ರವಾರ ರಾತ್ರಿ ಪೋಷಕರು ಆಕೆಯ ಯುವತಿಯ ಉಸಿರುಗಟ್ಟಿಸಿ ಸಾಯಿಸಿದ್ದಾರೆ ಹಾಗೂ ಬಳಿಕ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ ಶಾಹ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಯ್ಲಾ ಗ್ರಾಮದಲ್ಲಿ ನದಿಯೊಂದಕ್ಕೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ 19 ವರ್ಷದ ಯುವತಿಯ ಪೋಷಕರನ್ನು ಬಂಧಿಸಲಾಗಿದೆ. ಇದು ಮರ್ಯಾದೆ ಹತ್ಯೆ ಇರಬಹುದು ಶಂಕಿಸಲಾಗಿದೆ.
ಯುವತಿ ಮುಜಫ್ಫರನಗರದ ನ್ಯಾಯಾಲಯದಲ್ಲಿ ಶನಿವಾರ ತನ್ನ ಹೇಳಿಕೆ ದಾಖಲಿಸಬೇಕಿತ್ತು. ಆದರೆ ಆಕೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ .ಪೋಷಕರ ವಿರುದ್ಧ ಐಪಿಸಿ ಸೆಕ್ಷನ್ 302ರ (ಕೊಲೆ) ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಯುವತಿಯ ಪೋಷಕರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement