ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. ಆದರೆ ಮುಹೂರ್ತದ ಸಮಯದಲ್ಲಿ ಏಕಾಏಕಿ ಹಸೆಮಣೆಯಿಂದ ಮೇಲೆದ್ದ ಯುವತಿ, ತಾನು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಆತನನ್ನೇ ಮದುವೆಯಾಗುವುದಾಗಿ ಹೇಳಿ ಕಲ್ಯಾಣ ಮಂಪಟದಿಂದ ಹೊರ ನಡೆದಿದ್ದಾಳೆ.
ಶನಿವಾರ ರಾತ್ರಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಿವ್ಯಾ, ಯುವತಿ ಎಲ್ಲರ ಜೊತೆ ಫೋಟೊ ತೆಗೆಸಿಕೊಂಡಿದ್ದಳು. ಭಾನುವಾರ ಬೆಳಿಗ್ಗೆಯಿಂದಲೇ ಮದುವೆ ಶಾಸ್ತ್ರಗಳು ಸಹ ಸರಾಗವಾಗಿ ನಡೆದಾಗಲೂ ಸುಮ್ಮನಿದ್ದಳು. ಆದರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆಗೆ ವಿರೋಧಿಸಿದ್ದಾಳೆ. ಇದರಿಂದ ದಾರಿ ತೋಚದಂತಾದ ವರನ ಪೋಷಕರು ಮತ್ತು ಸಂಬಂಧಿಗಳು ಕ ಕೋಳಾಲ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ನಂತರ ಪೊಲೀಸರ ಸಮ್ಮುಖದಲ್ಲಿ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದು ಸಂಧಾನ ನಡೆಯಿತು. ಮದುವೆಯ ಖರ್ಚು ಭರಿಸುವುದಾಗಿ ವಧುವಿನ ಕುಟುಂಬಸ್ಥರು ಒಪ್ಪಿಕೊಂಡರು. ಈ ಎಲ್ಲ ಗೊಂದಲ ಮುಗಿದ ನಂತರ ಪೋಷಕರು, ವಧು ಇಷ್ಟಪಟ್ಟ ಯುವಕನ ಜೊತೆಗೆ ಆಕೆಯನ್ನು ಕಳುಹಿಸಿಕೊಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement