ಪ್ರಧಾನಿ ಅಭ್ಯರ್ಥಿಯಾಗಲು ಇಂಡಿಯಾ ಮೈತ್ರಿಕೂಟಕ್ಕೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ…: ಉದ್ಧವ್ ಠಾಕ್ರೆ ವಾಗ್ದಾಳಿ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಮುಂಬೈನಲ್ಲಿ ವಿಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು, ಪ್ರಧಾನಿ ಮೋದಿಯನ್ನು ಹೊರತುಪಡಿಸಿ ಪ್ರಧಾನಿ ಅಭ್ಯರ್ಥಿಯಾಗಲು ಎನ್‌ಡಿಎ ಮೈತ್ರಿಕೂಟಕ್ಕೆ ಬೇರೆ ಆಯ್ಕೆಗಳಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಇಂಡಿಯಾ-ಮೈತ್ರಿಕೂಟದಲ್ಲಿರುವ ಪಕ್ಷಗಳು ವಿಭಿನ್ನ ಸಿದ್ಧಾಂತಗಳನ್ನು ಹೊಂದಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಠಾಕ್ರೆ, “ಪ್ರಧಾನಿ ಅಭ್ಯರ್ಥಿಯಾಗಲು ನಮಗೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ ಬೇರೆ ಯಾರಿದ್ದಾರೆ? ಎಂದು ಪ್ರಶ್ನಿಸಿದರು.
ಬಿಜೆಪಿಯ ಆಡಳಿತವನ್ನು ಬ್ರಿಟಿಷ್ ರಾಜ್‌ಗೆ ಹೋಲಿಸಿದ ಉದ್ಧವ್‌ ಠಾಕ್ರೆ, ಬ್ರಿಟಿಷರೂ ಅಭಿವೃದ್ಧಿ ಕೆಲಸಗಳನ್ನು ಮಾಡಿದರು, ಆದರೆ ನಾವು ಪೂರ್ಣ ಬಲದಿಂದ ಓಡಿಸದಿದ್ದರೆ ನಾವು ಸ್ವಾತಂತ್ರ್ಯವನ್ನು ಸಾಧಿಸುತ್ತಿರಲಿಲ್ಲ, ನಮಗೆ ಅಭಿವೃದ್ಧಿ ಬೇಕು ಆದರೆ ನಮಗೂ ಸ್ವಾತಂತ್ರ್ಯ ವೂ ಬೇಕು ಎಂದು ಅವರು ಹೇಳಿದರು.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ಎನ್‌ಸಿಪಿ ನಾಯಕರ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಸ್ತಾಪಿಸಿದ ನೀರಾವರಿ ಹಗರಣದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಸತ್ಯವನ್ನು ಹೊರ ಹಾಕುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದರು.
ಎನ್‌ಸಿಪಿ ಇತ್ತೀಚಿನ ವಿಭಜನೆಯಾಗಿದ್ದಕ್ಕಾಗಿ ಅವರು ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಜಿತ್ ಪವಾರ್ ಅವರು ಜುಲೈ 2 ರಂದು ಇತರ ಎಂಟು ಎನ್‌ಸಿಪಿ ಶಾಸಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದ್ದರು.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತಟಸ್ಥ” ಎಂಬ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, ಶರದ್ ಪವಾರ್ ಅವರು, “ಮಾಯಾವತಿ ಇನ್ನೂ ಬಿಜೆಪಿಯೊಂದಿಗೆ ತಮ್ಮ ಸಂವಹನವನ್ನು ಜೀವಂತವಾಗಿರಿಸಿಕೊಂಡಿದ್ದಾರೆ, ಆದ್ದರಿಂದ ಅವರಿಂದ ಸ್ಪಷ್ಟತೆ ಬೇಕಾಗಿದೆ ಎಂದರು.
ಗುರುವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯ ಕುರಿತು ಮಾತನಾಡಿದ ಅವರು, ಮುಂಬೈನಲ್ಲಿ ಎರಡು ದಿನಗಳ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement