ಎಮ್ಮೆ ಕಳ್ಳತನ ಪ್ರಕರಣ: 11 ವರ್ಷಗಳ ನಂತರ ನ್ಯಾಯಾಲಯಕ್ಕೆ ಹಾಜರಾದ ಎಮ್ಮೆ

ಸಾಮಾನ್ಯವಾಗಿ ಕೋರ್ಟ್ ಆವರಣಕ್ಕೆ ವಕೀಲರು, ಪೋಲೀಸರು, ದೂರುದಾರರು, ಸಂಬಂಧಪಟ್ಟವರು ಬಂದು ಹೋಗುತ್ತಾರೆ, ಆದರೆ ಎಮ್ಮೆ ಈ ರೀತಿ ನ್ಯಾಯಾಲಯಕ್ಕೆ ಹಾಜರಾದರೆ..? ಬಹುಶಃ ಯಾರೂ ಯೋಚಿಸಿರಲಿಲ್ಲ. ಆದರೆ ಈ ವಿಶಿಷ್ಟ ಪ್ರಕರಣ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಎಮ್ಮೆಯೊಂದನ್ನು ಚೋಮು ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು, ಇದನ್ನು ನೋಡಿ ವಕೀಲರು ಸಹ ಆಶ್ಚರ್ಯಚಕಿತರಾದರು. ವಾಸ್ತವವಾಗಿ, ಇದು 26 ಜುಲೈ 2012ರ ಘಟನೆಗೆ … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ್ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಕುರಿತ ಟೀಕೆಗಳಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾನಿಲಯವು ತಮ್ಮ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳಿಗೆ ತಡೆ ನೀಡುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಮತ್ತು ಸಂಸದ ಸಂಜಯ ಸಿಂಗ್ ಅವರ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಉಭಯ ನಾಯಕರ ವಿರುದ್ಧ ಇಲ್ಲಿನ ಮೆಟ್ರೊಪಾಲಿಟನ್ … Continued

ಕಾಂಗ್ರೆಸ್ ಶಾಸಕ ನನಗೆ ಬೂಟು ನೆಕ್ಕುವಂತೆ ಮಾಡಿದ, ಪೋಲೀಸ್ ಅಧಿಕಾರಿ ನನ್ನ ಮೇಲೆ ಮೂತ್ರ ವಿಸರ್ಜಸಿದ: ದಲಿತ ವ್ಯಕ್ತಿಯಿಂದ ದೂರು ದಾಖಲು

ಜೈಪುರ: ಜೈಪುರ ಪೊಲೀಸರು ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮತ್ತು ಶಾಸಕರ ಪಾದರಕ್ಷೆ ನೆಕ್ಕುವಂತೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಗೋಪಾಲ ಮೀನಾ ಮತ್ತು ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆ ಜೂನ್ 30 ರಂದು ಸಂಭವಿಸಿದೆ, ಆದರೆ ಸಂತ್ರಸ್ತ ‘ಭಯ’ದಿಂದ ಜುಲೈ 27 ರಂದು ದೂರು ದಾಖಲಿಸಿದ್ದಾರೆ. … Continued

ತನಿಖೆ ಮುಗಿಯುವವರೆಗೆ ಗುತ್ತಿಗೆದಾರರ ಬಾಕಿ ಪಾವತಿಸುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ನಮ್ಮ ಸರ್ಕಾರ ಆದೇಶಿಸಿದೆ ಮತ್ತು ತನಿಖೆ ಪೂರ್ಣಗೊಳ್ಳುವವರೆಗೆ ಸಿವಿಲ್ ಗುತ್ತಿಗೆದಾರರ ಬಾಕಿ ಬಿಲ್‌ಗಳ ಪಾವತಿಯನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ರಾಜ್ಯ … Continued

ಗುರುವಾಯೂರು ದೇವಸ್ಥಾನದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟ ಅರ್ಪಿಸಿದ ತಮಿಳುನಾಡು ಸಿಎಂ ಸ್ಟಾಲಿನ್ ಪತ್ನಿ

ತ್ರಿಶೂರ್: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಗುರುವಾರ ತ್ರಿಶೂರ್ ಜಿಲ್ಲೆಯ ಪ್ರಖ್ಯಾತ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಡಿಎಂಕೆ ನಾಯಕನ ಪತ್ನಿ ಪ್ರಸಿದ್ಧ ದೇವಸ್ಥಾನದ ದೇವರಾದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟವನ್ನು ಅರ್ಪಿಸಿದರು. ಸುಮಾರು 32 ಸೊವೆರಿನ್‌ ತೂಕದ ಚಿನ್ನದ ಕಿರೀಟವು ಸುಮಾರು 14 ಲಕ್ಷ ರೂ.ಗಳ ಮೌಲ್ಯದ್ದಾಗಿದೆ. … Continued

ಕ್ರಿಮಿನಲ್ ಕಾನೂನುಗಳ ಮಾರ್ಪಾಡಿಗೆ ಕೇಂದ್ರದಿಂದ ಮೂರು ನೂತನ ಮಸೂದೆಗಳ ಮಂಡನೆ: ʼದೇಶದ್ರೋಹʼ ಕಾನೂನು ರದ್ದು-ಅಮಿತ್‌ ಶಾ

ನವದೆಹಲಿ: ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಕೇಂದ್ರ ಸರ್ಕಾರ ಶುಕ್ರವಾರ (ಆಗಸ್ಟ್‌ ೧೧) ಸಂಸತ್ತಿನಲ್ಲಿ ಮೂರು ನೂತನ ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಂಸತ್ತಿನಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶದಿಂದ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಹಾಗೂ ದೇಶದ್ರೋಹ ಕಾನೂನನ್ನು “ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು” ಎಂದು ಹೇಳಿದ್ದಾರೆ. ರದ್ದುಗೊಳಿಸಲು … Continued

ಹೊಲನಗದ್ದೆಯ ಗ್ರಾಪಂ ಅಧ್ಯಕ್ಷರಾಗಿ ಎಂ. ಎಂ. ಹೆಗಡೆ ಆಯ್ಕೆ

ಕುಮಟಾ: ತಾಲೂಕಿನ ಹೊಲನಗದ್ದೆಯ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ಎಂ. ಎಂ. ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಮಹಾಂತೇಶ ಹರಿಕಂತ್ರ ಅವರು ಆಯ್ಕೆಯಾಗಿದ್ದಾರೆ. ಸತತವಾಗಿ 5 ಬಾರಿ ಆಯ್ಕೆಯಾಗಿದ್ದ ವೇಳೆ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದ್ದ ಎಂ.ಎಂ. ಹೆಗಡೆ ಅವರು ಕೊನೆಗೂ 6ನೇ ಬಾರಿ ಗಾಪಂಗೆ ಆಯ್ಕೆಯಾಗಿರುವ ವೇಳೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಂ.ಎಂ. … Continued

ʼಫೋರ್ಜರಿʼ ಮಾಡಿದ ಆರೋಪದ ಮೇಲೆ ಎಎಪಿ ಸಂಸದ ರಾಘವ ಚಡ್ಡಾ ರಾಜ್ಯಸಭೆಯಿಂದ ಅಮಾನತು

ನವದೆಹಲಿ: ಆಮ್ ಆದ್ಮಿತ್ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ರಾಜ್ಯಸಭೆಯಲ್ಲಿ ದೆಹಲಿ ಸೇವಾ ಮಸೂದೆಗೆ ಸಂಬಂಧಿಸಿದ ಪ್ರಸ್ತಾವನೆಯಲ್ಲಿ ಐವರು ಸಂಸದರ ಸಹಿಯನ್ನು ನಕಲಿ ಮಾಡಿದ ಆರೋಪದ ಮೇಲೆ ವಿಶೇಷಾಧಿಕಾರ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ನಾಲ್ಕು ರಾಜ್ಯಸಭಾ ಸಂಸದರು ತಮ್ಮ ಅನುಮತಿಯಿಲ್ಲದೆ ತಮ್ಮ ಹೆಸರನ್ನು ಆಗಸ್ಟ್ 7 ರಂದು ಸದನ … Continued

ನಟಿ, ಮಾಜಿ ಸಂಸದೆ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ..

ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಚೆನ್ನೈನ ರಾಯಪೇಟೆಯಲ್ಲಿ ಆಕೆಯ ಒಡೆತನದ ಚಿತ್ರಮಂದಿರದ ಉದ್ಯೋಗಿಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಆಕೆಗೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಚಿತ್ರ ಮಂದಿರದ ನೌಕರರ ಇಎಸ್‌ಐ ಪಾವತಿಸಲು ಆಡಳಿತ ಮಂಡಳಿ ವಿಫಲವಾಗಿದ್ದರಿಂದ ಸಮಸ್ಯೆ ಆರಂಭವಾಗಿದ್ದು, ಅವರು … Continued

ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ಕೆಂಪಣ್ಣ : ಕಾಮಗಾರಿಗಳ ತನಿಖೆಗೆ ಎಸ್‌ಐಟಿ ರಚನೆಗೆ ವಿರೋಧ

ಬೆಂಗಳೂರು : ಕಳೆದ ಸರ್ಕಾರದ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಕಾಂಗ್ರೆಸ್​ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ಹೇಳಿದ್ದಾರೆ. ಇಂದು, ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ ಅವರು, ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾವ ಸಚಿವರೂ … Continued