ಮ್ಯೂಸಿಕ್ ಕಂಪನಿ ಸಿಇಒ ಕಿಡ್ನಾಪ್ ಮಾಡಿದ ಶಿವಸೇನಾ ಶಾಸಕನ ಪುತ್ರನ ವಿರುದ್ಧ ಎಫ್‌ ಐಆರ್ | ವೀಡಿಯೊ

ಮುಂಬೈ : ಬುಧವಾರ (ಆಗಸ್ಟ್‌ 9) ಗೋರೆಗಾಂವ್ ಪೂರ್ವ ಪ್ರದೇಶದಿಂದ ಸುಲಿಗೆ ಮಾಡಲು ಉದ್ಯಮಿ ರಾಜಕುಮಾರ ಸಿಂಗ್ ಅವರನ್ನು ಅಪಹರಿಸಿದ ಆರೋಪದಲ್ಲಿ ಶಿವಸೇನಾ (ಶಿಂಧೆ ಬಣ) ಶಾಸಕ ಪ್ರಕಾಶ ಸುರ್ವೆ ಅವರ ಪುತ್ರ ರಾಜ್ ಸುರ್ವೆ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ವನರಾಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. … Continued

ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದ ದಂಡ, ಎಟಿಎಂ-ಎಸ್‌ಎಂಎಸ್ ಶುಲ್ಕಗಳಿಂದ 35,000 ಕೋಟಿ ರೂ. ಸಂಗ್ರಹಿಸಿದ ಬ್ಯಾಂಕುಗಳು

ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಐದು ಖಾಸಗಿ ವಲಯದ ಬ್ಯಾಂಕ್‌ಗಳು 2018 ರಿಂದ ಎಸ್‌ಎಂಎಸ್, ಎಟಿಎಂ ವಹಿವಾಟು ಸೇವೆಗಳಿಗಾಗಿ ಹಾಗೂ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸದ ಕಾರಣಕ್ಕಾಗಿ ದಂಡದ ಮೂಲಕ 35,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ವಿತ್ತ ಸಚಿವಾಲಯದ … Continued

ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಗುರುವಾರ ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಪ್ರಮುಖ ರೆಪೊ ದರವನ್ನು ಬದಲಾಯಿಸದೆ ಶೇ 6.50 ಕ್ಕೆ ಇರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.. ಇದು ಮೂರನೇ ಬಾರಿಗೆ 6 ಸದಸ್ಯರ ಹಣಕಾಸು ನೀತಿ ಸಮಿತಿ (MPC) ಪ್ರಮುಖ ದರಗಳನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ. … Continued

ಧಾರವಾಡದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾದ ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಧಾರವಾಡ : ವಿಶ್ವವಿಖ್ಯಾತ ಸ್ಪಿನ್‌ ಬೌಲರ್‌ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಅವರು ಕ್ರಿಕೆಟ್‌ ನಿಂದ ನಿವೃತ್ತಿಯಾದ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರು ಧಾರವಾಡದಲ್ಲಿ ತಮ್ಮ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಶ್ರೀಲಂಕಾದಲ್ಲಿ ಈಗಾಗಲೇ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿರುವ ಮುತ್ತಯ್ಯ ಮುರಳೀಧರನ್‌, ತಂಪು ಪಾನೀಯ ಉತ್ಪಾದನೆ ಮಾಡುವ ಸಿಲೋನ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು … Continued

ಹದಿಹರೆಯದವರಿಗೆ ಹಣ ನೀಡಿ ಭಾರತದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳನ್ನು ಸಂಗ್ರಹಿಸಿದ್ದ ಲಂಡನ್ ಶಿಕ್ಷಕನಿಗೆ 12 ವರ್ಷ ಜೈಲು: ಈತನ ಬಳಿ ಸಿಕ್ಕಿವೆ 1.2 ಲಕ್ಷ ಅಶ್ಲೀಲ ಫೋಟೋಗಳು…!

ಸಣ್ಣ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳಲು ಭಾರತದಲ್ಲಿ ಹದಿಹರೆಯದವರಿಗೆ ಹಣ ನೀಡಿ ಭಾರತದ ಮಕ್ಕಳ ಬೆತ್ತಲೆ ಹಾಗೂ ಅಶ್ಲೀಲ ಚಿತ್ರಗಳನ್ನು ಪಡೆಯುತ್ತಿದ್ದ ಲಂಡನ್ ಶಿಕ್ಷಕನಿಗೆ 12 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಲಂಡನ್​ನ ಸೌತ್​ವಾರ್ಕ್ ಕ್ರೌನ್​ ಕೋರ್ಟ್​ ಈತನಿಗೆ ಬುಧವಾರ ಈ ಶಿಕ್ಷೆಯನ್ನು ವಿಧಿಸಿದೆ. ದಕ್ಷಿಣ ಲಂಡನ್‌ನ ಪೂರ್ವ ಡಲ್ವಿಚ್‌ನ ಮ್ಯಾಥ್ಯೂ ಸ್ಮಿತ್ (35) ಕಳೆದ ವರ್ಷ … Continued

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಆಗಿರಬೇಕು : ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ … Continued

ಸಿದ್ದಾಪುರ :ಖ್ಯಾತ ಯಕ್ಷಗಾನ ಭಾಗವತ ಕೆ.ಪಿ.ಹೆಗಡೆಗೆ ʼಅನಂತಶ್ರೀʼ ಪ್ರಶಸ್ತಿ

ಸಿದ್ದಾಪುರ : ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತರಾದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆ ಅವರಿಗೆ ಯಕ್ಷಗಾನದ ಖ್ಯಾತ ಕಲಾವಿದರಾಗಿದ್ದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ‌ ನೀಡಲಾಗುವ ‘ಅನಂತಶ್ರೀ’ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ‌ ಯಕ್ಷ ಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಅವರು, ಕಳೆದ … Continued

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ ಭೂಷಣ್

ನವದೆಹಲಿ: ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನ್ಯಾಯಾಲಯದ ಮುಂದೆ ಲೈಂಗಿಕ ಕಿರುಕುಳದ ಆರೋಪಗಳ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ, ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಅವರು ನ್ಯಾಯಾಲಯದ ಮುಂದೆ ಹೇಳಿದ್ದಾರೆ. ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ ಬ್ರಿಜ್ ಭೂಷಣ್ … Continued

ಟೊಮೆಟೊ ಹಾರ ಹಾಕಿಕೊಂಡು ಸದನಕ್ಕೆ ಬಂದ ಎಎಪಿ ಸಂಸದ

ನವದೆಹಲಿ: ಏರುತ್ತಿರುವ ಬೆಲೆಗಳ ವಿರುದ್ಧ ವಿಶಿಷ್ಟವಾದ ಪ್ರತಿಭಟನೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸುಶೀಲಕುಮಾರ ಗುಪ್ತಾ ಅವರು ಬುಧವಾರ ಟೊಮೆಟೊ ಮತ್ತು ಶುಂಠಿಯ ಹಾರ ಹಾಕಿಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಟೊಮೆಟೊ ಮತ್ತು ಶುಂಠಿಯ ಬೆಲೆ ಏರಿಕೆಯ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾನು ಸಂಸತ್ತಿಗೆ ಈ ಹಾರವನ್ನು ಧರಿಸಿ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. … Continued

ಜಿ-ಮೇಲ್‌ ಮೊಬೈಲ್ ಅಪ್ಲಿಕೇಶನ್‌ ಗೆ ಭಾಷಾ ಅನುವಾದದ ಫೀಚರ್‌ ಸೇರಿಸಿದ ಗೂಗಲ್‌

ಜಿ-ಮೇಲ್‌ (Gmail) ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸಮಗ್ರ ಅನುವಾದದ ವೈಶಿಷ್ಟ್ಯವನ್ನು ಗೂಗಲ್‌ (Google) ಪರಿಚಯಿಸಿದೆ. ಈ ಕ್ರಮವು ತಡೆರಹಿತ ಭಾಷೆಯ ಸಂವಹನವನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ. ಜಿ-ಮೇಲ್‌ (Gmail) ಮೊಬೈಲ್ ಅಪ್ಲಿಕೇಶನ್‌(Gmail)ನಲ್ಲಿ ಈ ವೈಶಿಷ್ಟ್ಯವು ಬಳಕೆದಾರರಿಗೆ ನೇರವಾಗಿ ಸಿಗಲಿದೆ ಎಂದು ಗೂಗಲ್‌ ಹೇಳಿದ್ದು, ವಿವಿಧ ಭಾಷೆಗಳಲ್ಲಿ ಸಂಭಾಷಣೆಗಳನ್ನು ಸುಲಭವಾಗಿ ಗ್ರಹಿಸಲು ಅನುವು ಮಾಡಿಕೊಡುತ್ತದೆ. ಈ “ಹೆಚ್ಚು ವಿನಂತಿಸಿದ … Continued