“ಸನಾತನ ಧರ್ಮ”: ಉದಯನಿಧಿ ಹೇಳಿಕೆ ತಿರುಚಿದ ಆರೋಪ; ಬಿಜೆಪಿಯ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿನ ಪೋಸ್ಟ್‌ನಲ್ಲಿ, ಮಾಳವಿಯಾ ಅವರು ‘ಸನಾತನ ಧರ್ಮ’ ಕುರಿತು ಉದಯನಿಧಿ ಅವರ ಇತ್ತೀಚಿನ ಹೇಳಿಕೆಯು ಅದನ್ನು ಅನುಸರಿಸುವ 80 ಪ್ರತಿಶತದಷ್ಟು ಜನಸಂಖ್ಯೆಯ “ಜನಾಂಗೀಯ ಹತ್ಯೆ”ಯ ಕರೆಯಾಗಿದೆ ಎಂದು ಹೇಳಿದ್ದರು.
“ಅವರು (ಉದಯನಿಧಿ) ಅದನ್ನು (ಸನಾತನ ಧರ್ಮ) ನಿರ್ಮೂಲನೆ ಮಾಡಬೇಕು ಮತ್ತು ಕೇವಲ ವಿರೋಧಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಂಕ್ಷಿಪ್ತವಾಗಿ, ಅವರು ಸನಾತನ ಧರ್ಮವನ್ನು ಅನುಸರಿಸುವ 80% ಭಾರತದ ಜನಸಂಖ್ಯೆಯ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ” ಎಂದು ಮಾಳವೀಯ ಟ್ವೀಟ್‌ನಲ್ಲಿ ಹೇಳಿದ್ದರು.
ಡಿಎಂಕೆ ಪದಾಧಿಕಾರಿ ಕೆಎವಿ ದಿನಕರನ್ ಅವರ ದೂರಿನ ಮೇರೆಗೆ ತಮಿಳುನಾಡಿನ ತಿರುಚ್ಚಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153, 153 (ಎ), 504 ಮತ್ತು 505 (1) (ಬಿ) ಸೆಕ್ಷನ್‌ಗಳ ಅಡಿಯಲ್ಲಿ ಮಾಳವಿಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್‌ ಪಂಜಾಬಿನ ಆಸ್ತಿ ವಶಪಡಿಸಿಕೊಂಡ ಎನ್‌ಐಎ

ಸನಾತನ ಧರ್ಮದ ಕುರಿತು ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರು ಸ್ಪಷ್ಟನೆ ನೀಡಿದ್ದರೂ, ಎರಡು ಗುಂಪುಗಳ ನಡುವೆ ಹಿಂಸಾಚಾರ ಮತ್ತು ದ್ವೇಷವನ್ನು ಬಿತ್ತಲು ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ಅಮಿತ್ ಮಾಳವೀಯ ಅವರು ಸಚಿವರು ಮಾಡಿದ ಭಾಷಣವನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
‘ಸನಾತನ ಧರ್ಮ’ ಕುರಿತು ಉದಯನಿಧಿ ಸ್ಟಾಲಿನ್ ಅವರ ಇತ್ತೀಚಿನ ಹೇಳಿಕೆಯು ವಿವಾದಕ್ಕೆ ಕಾರಣವಾಯಿತು. ಅದರ ನಂತರ, ಹಲವಾರು ಹಿಂದುತ್ವ ಗುಂಪುಗಳು, ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಡಿಎಂಕೆ ನಾಯಕನನ್ನು ಟೀಕಿಸಿದವು.
ಸೆಪ್ಟೆಂಬರ್ 3 ರಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ, ಸನಾತನ ಧರ್ಮವನ್ನು ಕೇವಲ ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.
ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನ ಧರ್ಮವನ್ನು ಹೇಗೆ ನಿರ್ಮೂಲನೆ ಮಾಡಬೇಕು” ಎಂದು ಅವರು ಸಮ್ಮೇಳನದಲ್ಲಿ ಹೇಳಿದರು.
ಮಾಳವೀಯ ಟ್ವೀಟ್ ಬಳಿಕ ಉದಯನಿಧಿ ಅವರು ಸನಾತನ ಧರ್ಮದ ಅನುಯಾಯಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿಲ್ಲ ಎಂದು ಹೇಳಿದ್ದರು.
ಆದಾಗ್ಯೂ, ಅವರು ತಮ್ಮ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ ಹಾಗೂ ‘ಸನಾತನ ಧರ್ಮ’ದಿಂದ ನೊಂದ ಸಮುದಾಯಗಳ ಪರವಾಗಿ ಮಾತನಾಡಿದ್ದೇನೆ ಎಂದು ಪ್ರತಿಪಾದಿಸಿದರು.

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್‌ನಿಂದ 3 ಭಾರತೀಯ ಅಥ್ಲೀಟ್‌ಗಳಿಗೆ ಚೀನಾ ನಿಷೇಧದ ನಂತರ ಕ್ರೀಡಾ ಸಚಿವರ ಪ್ರವಾಸ ರದ್ದು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement