ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳು ಬರ ಪೀಡಿತ : ಸರ್ಕಾರ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.
ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ‌ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಘೋಷಣೆ ಮಾಡಿದ್ದಾರೆ.
ತೀವ್ರ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಹಳಿಯಾಳ, ಮುಂಡಗೋಡ, ಶಿರಸಿ ಮತ್ತು ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದೆ. ಸಾಧಾರಣ ಬರ ಪೀಡಿತವಾಗಿರುವ ತಾಲೂಕುಗಳ ಪಟ್ಟಿಯಲ್ಲಿ ಅಂಕೋಲಾ, ಕಾರವಾರ, ಕುಮಟಾ, ಭಟ್ಕಳ, ಜೊಯಿಡಾ ಸೇರಿಸಲಾಗಿದೆ. ಹೊನ್ನಾವರ, ಸಿದ್ದಾಪುರ‌ ಹಾಗೂ ದಾಂಡೇಲಿ ತಾಲೂಕುಗಳು ಬರದ‌ ಪಟ್ಟಿಯಲ್ಲಿ ಸೇರಿವೆ. ಜಿಲ್ಲೆಯ 9 ತಾಲೂಕುಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.

 

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement