ರಾಜ್ಯದ 161 ತಾಲೂಕುಗಳು ತೀವ್ರ ಬರ ಪೀಡಿತ, 34 ತಾಲೂಕುಗಳಲ್ಲಿ ಸಾಧಾರಣ ಬರ: ಸರ್ಕಾರದಿಂದ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 161 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ನಂತರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಅದರಲ್ಲಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. (ಬರ ಪೀಡಿತ ತಾಲೂಕುಗಳ ಪಟ್ಟಿಗಾಗಿ ಇಲ್ಲಿ  Drought talukas list   ಕ್ಲಿಕ್‌ ಮಾಡಿ)
ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದ್ದು, ಕಾಲ ಕಾಲಕ್ಕೆ ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement