ಪಂಜಾಬ್ನ ಮೋಗಾ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯೊಂದರಲ್ಲಿ ಬಲ್ಜಿಂದರ್ ಸಿಂಗ್ ಬಲ್ಲಿ ಎಂಬ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಸೋಮವಾರ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೆಲ ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಾಧ್ಯಮ ವರದಿಗಳ ಪ್ರಕಾರ, ಬಲ್ಲಿ ಅಜಿತ್ವಾಲ್ನಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಕಾಂಗ್ರೆಸ್ ನಾಯಕ ಬಲ್ಜಿಂದರ್ ಸಿಂಗ್ ಬಲ್ಲಿ ಅವರು ಕ್ಷೌರ ಮಾಡಿಸಿಕೊಳ್ಳುತ್ತಿರುವಾಗ ಅಪರಿಚಿತ ವ್ಯಕ್ತಿಗಳು ಕೆಲವು ದಾಖಲೆಗಳಿಗೆ ಸಹಿ ಮಾಡುವಂತೆ ವಿನಂತಿಸಿ ಅವರಿಗೆ ಕರೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಕರೆ ಸ್ವೀಕರಿಸಿದ ನಂತರ ಕಾಂಗ್ರೆಸ್ ನಾಯಕ ತನ್ನ ಮನೆಯಿಂದ ಹೊರಗೆ ಬಂದಿದ್ದಾರೆ. ಇಬ್ಬರು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಬಲ್ಲಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಗಂಭೀರವಾಗಿ ಗಾಯಗೊಂಡರು. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದರು.ತಕ್ಷಣ ಬಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಯ ಕುರಿತು ಸ್ಥಳೀಯ ಅಧಿಕಾರಿಗಳು ಎಚ್ಚರಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ
ಹತ್ಯೆ ಹೊಣೆ ಹೊತ್ತುಕೊಂಡ ಖಲಿಸ್ತಾನಿ ಭಯೋತ್ಪಾದಕ
ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಅರ್ಶ್ ದಲ್ಲಾ ವಿವರವಾದ ಫೇಸ್ಬುಕ್ ಪೋಸ್ಟ್ನಲ್ಲಿ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.
ತನ್ನ ಪೋಸ್ಟ್ನಲ್ಲಿ, ಬಲ್ಜಿಂದರ್ ಸಿಂಗ್ ಬಲ್ಲಿ ತನ್ನ ಭವಿಷ್ಯವನ್ನು ಹಾಳುಮಾಡಿದ್ದಾನೆ ಮತ್ತು ತನ್ನುನ್ನು ದರೋಡೆಕೋರ ಸಂಸ್ಕೃತಿಗೆ ಹೋಗುವಂತೆ ಮಾಡಿದ್ದಾನೆ ಎಂದು ದಲ್ಲಾ ಆರೋಪಿಸಿದ್ದಾನೆ.
ತಾಯಿಯ ಪೊಲೀಸ್ ಕಸ್ಟಡಿ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡವಿದೆ ಎಂದು ತತ ಉಲ್ಲೇಖಿಸಿ ಇದು ಸೇಡು ತೀರಿಸಿಕೊಳ್ಳಲು ಪ್ರೇರೇಪಿಸಿತು ಎಂದು ಹೇಳಿದ್ದಾನೆ.
ಅರ್ಶ್ ದಲ್ಲಾ ಒಬ್ಬ ಉಗ್ರಗಾಮಿ ಎಂದು ಪಟ್ಟಿ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ಬೇಕಾಗಿದ್ದಾನೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಕೆನಡಾದಿಂದ ಕಾರ್ಯಾಚರಣೆ ನಡೆಸುತ್ತಿರುವ ಈತ ಪಂಜಾಬ್ ನಲ್ಲಿ ನಡೆದ ಹಲವು ಭಯೋತ್ಪಾದಕ ಹತ್ಯೆಗಳಲ್ಲಿ ಭಾಗಿಯಾಗಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ