ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿ ಪರಿಷ್ಕರಣೆ

ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ ಧಾರವಾಡ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ.
ಅಕ್ಟೋಬರ್ 7ರಿಂದ ಜಾರಿಗೆ ಬರುವಂತೆ ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 20661 ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ ಎಕ್ಸ್ ಪ್ರೆಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 11:30/11:35 ರ ಬದಲು ಬೆಳಿಗ್ಗೆ 11:00/11:05 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ. ರೈಲು ಸಂಖ್ಯೆ 20662 ಧಾರವಾಡ- ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ಯಶವಂತಪುರ ನಿಲ್ದಾಣಕ್ಕೆ ಸಂಜೆ 07:13/07:15 ರ ಬದಲು ಸಂಜೆ 06:58/07:00 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
ಈ ರೈಲುಗಳ ಸಮಯವು ಇತರ ಎಲ್ಲಾ ನಿಲ್ದಾಣಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ಅವರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement